ಹೊಳೆಯಲ್ಲಿ ಮುಳುಗಿ ಮಹಿಳೆ ಮೃತ್ಯು

Update: 2023-11-12 15:39 GMT

ಕುಂದಾಪುರ, ನ.12: ಮಳಿ ತೆಗೆಯಲು ಹೋದ ಮಹಿಳೆಯೊಬ್ಬರು ಪಂಚಗಂಗಾವಳಿ ಹೊಳೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ನ.10ರಂದು ರಾತ್ರಿ ವೇಳೆ ನಡೆದಿದೆ.

ಮೃತರನ್ನು ಕುಂದಾಪುರ ಕಸಬಾ ನಿವಾಸಿ ಸತ್ಯವತಿ ಎಂದು ಗುರುತಿಸಲಾಗಿದೆ. ಇವರು ನ.10ರಂದು ಸಂಜೆ ಮುಳಿಯ ತೆಗೆಯಲು ಹೋಗಿದ್ದು, ಈ ವೇಳೆ ಅಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ಇವರ ಮೃತದೇಹವು ನ.11 ರಂದು ಮಧ್ಯಾಹ್ನ ಖಾರ್ವಿಕೇರಿಯ ರಿಂಗ್ ರೋಡ್ ಸಮೀಪ ಪಂಚಗಂಗಾವಳಿ ಹೊಳೆಯಲ್ಲಿ ಪತ್ತೆಯಾಗಿದೆ.

ಈ ಬಗ್ಗೆ ಕುಂದಾಫುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News