ಬಾವಿಗೆ ಬಿದ್ದು ಯುವಕ ಮೃತ್ಯು

Update: 2023-08-28 15:12 GMT

ಕೋಟ, ಆ.28: ಬಾವಿಯ ಸ್ವಚ್ಚತಾ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಆ.27ರಂದು ಮಧ್ಯಾಹ್ನ ವೇಳೆ ಹಳ್ಳಾಡಿ-ಹರ್ಕಾಡಿ ಗ್ರಾಮದ ಹಳ್ಳಾಡಿ ಎಂಬಲ್ಲಿ ನಡೆದಿದೆ.

ಮೃತರನ್ನು ಹಳ್ಳಾಡಿ ನಿವಾಸಿ ಗಣೇಶ ಆಚಾರಿ(40) ಎಂದು ಗುರುತಿಸ ಲಾಗಿದೆ. ಮರದ ಕೆಲಸ ಮಾಡಿಕೊಂಡಿದ್ದ ಇವರು, ರಜೆಯ ದಿನ ಮನೆಯ ಬಾವಿಯ ಕಸವನ್ನು ಸ್ವಚ್ಛಗೊಳಿಸುವ ಕಾರ್ಯ ಮಾಡುತ್ತಿದ್ದರು. ಈ ವೇಳೆ ಅವರು ಅಕಸ್ಮಿಕವಾಗಿ ಕಾಲುಜಾರಿ ಬಾವಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟರು. ಬಳಿಕ ಅಗ್ನಿಶಾಮಕ ದಳದವರು ಆಗಮಿಸಿ ಮೃತದೇಹ ಮೇಲಕ್ಕೆ ಎತ್ತಿದರು. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News