ನದಿಗೆ ಹಾರಿ ಯುವತಿ ಆತ್ಮಹತ್ಯೆ

Update: 2023-10-13 14:52 GMT

ಶಿರ್ವ, ಅ.13: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿಯ ಮೃತದೇಹವು ಇಂದು ಬೆಳಗ್ಗೆ ಬೆಳ್ಳೆ ಗ್ರಾಮದ ಪಡುಬೆಳ್ಳೆ ಕಾಡ್ಲಚ್ಚಿಲ್ ಎಂಬಲ್ಲಿರುವ ಪಾಪನಾಶಿನಿ ನದಿಯಲ್ಲಿ ಪತ್ತೆಯಾಗಿದೆ.

ಮೃತರನ್ನು ಮೂಡುಬೆಳ್ಳೆಯ ವಿನಿತಾ(22) ಎಂದು ಗುರುತಿಸಲಾಗಿದೆ.

ಈಕೆ ಅ.9ರಂದು ಉಡುಪಿಗೆ ಹೋಗಿ ಬರುವುದಾಗಿ ತಿಳಿಸಿ ಮನೆಯಿಂದ ಹೋದವರು ವಾಪಾಸು ಬಾರದೆ ನಾಪತ್ತೆಯಾಗಿ ದ್ದರು. ಬಳಿಕ ಆಕೆ ವೈಯಕ್ತಿಕ ಕಾರಣದಿಂದ ಮನನೊಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನ ಲಾಗಿದೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News