ಪಿಂಚಣಿ ಯೋಜನೆಗೆ ಬ್ಯಾಂಕ್ ಖಾತೆಗಳ ಆಧಾರ್ ಜೋಡಣೆ ಕಡ್ಡಾಯ: ಉಡುಪಿ ಡಿಸಿ ಡಾ. ವಿದ್ಯಾಕುಮಾರಿ

Update: 2023-10-19 16:49 GMT

ಉಡುಪಿ, ಅ.19: ಸಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾ ಲಯದ ನಿರ್ದೇಶನದಂತೆ ಮಾಸಿಕ ಪಿಂಚಣಿ ಯೋಜನೆಗಳಾದ ವೃದ್ಧಾಪ್ಯ ವೇತನ, ಅಂಗವಿಕಲ ವೇತನ, ವಿಧವಾ ವೇತನ, ಸಂಧ್ಯಾಸುರಕ್ಷಾ ವೇತನ, ಮನಸ್ವಿನಿ ಮತ್ತು ಮೈತ್ರಿ ಯೋಜನೆಗಳಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ಮಾಸಿಕ ಪಿಂಚಣಿ ವಿತರಣೆಯನ್ನು ಆಧಾರ್ ಆಧಾರಿತ ನೇರ ಹಣ ಸಂದಾಯ ವ್ಯವಸ್ಥೆಯಡಿ ಫಲಾನುಭವಿಗಳ ಬ್ಯಾಂಕ್/ಅಂಚೆ ಉಳಿತಾಯ ಖಾತೆಗೆ ನೇರವಾಗಿ ಜಮಾ ಮಾಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.

ಇಂದು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಈ ಯೋಜನೆ ಯಡಿ ಪಿಂಚಣಿ ಪಡೆಯುತ್ತಿ ರುವ ಎಲ್ಲಾ ಪಿಂಚಣಿದಾರರು ಪಿಂಚಣಿ ಪಾವತಿ ಖಾತೆಗೆ ಕಡ್ಡಾಯವಾಗಿ ಆಧಾರ್ ಜೋಡಣೆ ಮತ್ತು ಎನ್‌ಪಿಸಿಐ ಮ್ಯಾಪಿಂಗ್ ಮಾಡಿಸಿಕೊಳ್ಳಬೇಕು ಎಂದರು.

ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಹಾಗೂ ಮ್ಯಾಪಿಂಗ್ ಮಾಡಿಸಿಕೊಳ್ಳದಿದ್ದರೆ ಮುಂದಿನ ನವೆಂಬರ್ ತಿಂಗಳನಿಂದ ಅವರ ಖಾತೆಗೆ ಪಿಂಚಣಿ ದುಡ್ಡು ಜಮೆಯಾಗುವುದಿಲ್ಲ, ಪಿಂಚಣಿ ಪಾವತಿ ಸ್ಥಗಿತಗೊಳ್ಳುವುದು. ಹೀಗಾಗಿ ಎಲ್ಲಾ ಫಲಾನುಭವಿ ಪಿಂಚಣಿದಾರರು ಆಧಾರ್ ಜೋಡಣೆ, ಮ್ಯಾಪಿಂಗ್ ಮಾಡುವಂತೆ ಡಾ.ವಿದ್ಯಾಕುಮಾರಿ ಮನವಿ ಮಾಡಿದರು.

ಎನ್‌ಪಿಸಿಐ ಮ್ಯಾಪಿಂಗ್ ಎಂದರೆ ಬ್ಯಾಂಕ್/ಅಂಚೆ ಉಳಿತಾಯ ಖಾತೆಯನ್ನು ಆಧಾರ್ ಸಂಖ್ಯೆಗಳೊಂದಿಗೆ ಸಂಯೋಜಿ ಸುವ ಪ್ರಕ್ರಿಯೆ. ಈ ಸಂಬಂಧ ಉಡುಪಿ ಜಿಲ್ಲೆಯಲ್ಲಿ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ ಗಳಡಿ ಪಿಂಚಣಿ ಪಡೆಯುತ್ತಿ ರುವ ಫಲಾನುಭವಿಗಳು ಈವರೆಗೆ ಪಿಂಚಣಿ ಪಾವತಿ ಖಾತೆಗೆ ಆಧಾರ್ ಜೋಡನೆ ಮಾಡಿಕೊಳ್ಳದಿದ್ದಲ್ಲಿ ಅ.25ರೊಳಗೆ ಪಿಂಚಣಿ ಪಡೆಯಲು ಬ್ಯಾಂಕ್/ಅಂಚೆ ಖಾತೆ ಹೊಂದಿರುವ ಬ್ಯಾಂಕ್/ಅಂಚೆ ಕಚೇರಿಯನ್ನು ಸಂಪರ್ಕಿಸಿ ತಕ್ಷಣವೇ ಇಕೆವೈಸಿ (ಆಧಾರ್ ಜೋಡಣೆ) ಪ್ರಕ್ರಿಯೆ ಜೊತೆಗೆ ಎನ್‌ಪಿಸಿಐ ಮ್ಯಾಪಿಂಗ್ ಮಾಡಿಕೊಳ್ಳವಂತೆ ಹಾಗೂ ಅವು ಆಗಿರುವ ಕುರಿತು ದೃಢೀಕರಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ 4389 ಮಂದಿ ಬಾಕಿ

ಉಡುಪಿ ಜಿಲ್ಲೆಯಲ್ಲಿ ಇತ್ತೀಚಿನ ಮಾಹಿತಿಯಂತೆ ಒಟ್ಟು 1,48, 143 ಪಿಂಚಣಿದಾರರಿದ್ದು, ಇವರಲ್ಲಿ 4,389 ಮಂದಿ ಇನ್ನೂ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಲ್ಲ. ಇವುಗಳಲ್ಲಿ ಉಡುಪಿ ತಾಲೂಕಿನಲ್ಲಿ 1025, ಕಾಪು ತಾಲೂಕಿನಲ್ಲಿ 420, ಬ್ರಹ್ಮಾವರ ತಾಲೂಕಿನಲ್ಲಿ 801, ಕುಂದಾಪುರ ತಾಲೂಕಿನಲ್ಲಿ 993, ಬೈಂದೂರು ತಾಲೂಕಿನಲ್ಲಿ 662, ಕಾರ್ಕಳ ತಾಲೂಕಿ ನಲ್ಲಿ 430 ಹಾಗೂ ಹೆಬ್ರಿ ತಾಲೂಕಿನಲ್ಲಿ 118 ಮಂದಿ ಆಧಾರ್ ಜೋಡಣೆ, ಮ್ಯಾಪಿಂಗ್‌ಗೆ ಬಾಕಿ ಇದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News