ಅಪಘಾತ: ಗಾಯಾಳು ಸ್ಕೂಟರ್ ಸವಾರ ಮೃತ್ಯು

Update: 2024-09-04 15:13 GMT

ಉಡುಪಿ, ಸೆ.೪: ಆದಿಉಡುಪಿ ಎಪಿಎಂಸಿ ಮಾರ್ಕೆಟ್ ದ್ವಾರದ ಎದುರುಗಡೆ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಸ್ಕೂಟರ್ ಸವಾರರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು ತೆಂಕನಿಡಿಯೂರು ಗ್ರಾಮದ ವಿಠಲ (78) ಎಂದು ಗುರುತಿಸ ಲಾಗಿದೆ. ಇವರು ಆ.14ರಂದು ಆದಿಉಡುಪಿ ಕಡೆಯಿಂದ ಕೊಡವೂರು ಕಡೆಗೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದು. ಈ ವೇಳೆ ರಸ್ತೆಯಲ್ಲಿದ್ದ ಹೊಂಡವನ್ನು ತಪ್ಪಿಸುವಾಗ ನಿಯಂತ್ರಣ ತಪ್ಪಿಸ್ಕೂಟರ್ ಸಮೇತ ರಸ್ತೆಗೆ ಗಾಯಗೊಂಡಿದ್ದರು.

ಬಳಿಕ ಚಿಕಿತ್ಸೆ ಪಡೆದುಕೊಂಡು ಮನೆಗೆ ತೆರಳಿದ್ದ ಇವರ ಗಾಯಗಳು ಸಂಪೂರ್ಣ ಗುಣಮುಖ ಆಗದೆ ಇದ್ದು, ಗಾಯಗಳಿಂದ ಉಸಿರಾಟದ ಸಮಸ್ಯೆ ಹಾಗೂ ಹೃದಯದ ಸಮಸ್ಯೆ ಉಂಟಾಗಿ ಸೆ.೨ರಂದು ನಸುಕಿನ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ತಿಳಿದು ಬಂದಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News