ಅಪಘಾತ: ಸ್ಕೂಟರ್ ಸವಾರ ಮೃತ್ಯು

Update: 2024-08-18 12:00 GMT

ಶಿರ್ವ, ಆ.19: ಸ್ಕೂಟರ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಮೃತಪಟ್ಟ ಘಟನೆ ಆ.17ರಂದು ಸಂಜೆ 7ಗಂಟೆ ಸುಮಾರಿಗೆ ಬೆಳಪು ಗ್ರಾಮದ ವಿನಯ ನಗರ ಅಂಗನವಾಡಿ ಹತ್ತಿರ ನಡೆದಿದೆ.

ಮೃತರನ್ನು ಎಲ್ಲೂರು ಬಂಡಸಾಲೆ ನಿವಾಸಿ ಜಗದೀಶ (35) ಎಂದು ಗುರುತಿಸಲಾಗಿದೆ. ಇವರು ಮನೆಯಿಂದ ತನ್ನ ಸ್ನೇಹಿತನ ಮನೆಗೆ ಊಟಕ್ಕೆಂದು ಹೋಗಿದ್ದು, ವಾಪಾಸ್ಸು ಬರುವಾಗ ಸ್ಕೂಟರ್ ಸ್ಕಿಡ್ ಆಗಿ ಬಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಸವಾರ ಜಗದೀಶ ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News