ಬೆಂಕಿ ಅಕಸ್ಮಿಕ: ಗಾಯಾಳು ಮಹಿಳೆ ಮೃತ್ಯು

Update: 2023-10-22 21:38 IST
ಬೆಂಕಿ ಅಕಸ್ಮಿಕ: ಗಾಯಾಳು ಮಹಿಳೆ ಮೃತ್ಯು
  • whatsapp icon

ಕುಂದಾಪುರ, ಅ.22: ಬೆಂಕಿ ಅಕಸ್ಮಿಕದಿಂದ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು ಮೊಂತಿ ಪಿರೇರಾ(76) ಎಂದು ಗುರುತಿಸಲಾಗಿದೆ. ಅ.8ರಂದು ರಾತ್ರಿ ಮನೆಯಲ್ಲಿ ಕರೆಂಟ್ ಹೋದ ಕಾರಣ ಮೇಣದ ಬತ್ತಿ ಹಚ್ಚಿ ಟೇಬಲ್ ಮೇಲಿಟ್ಟು ಮೊಂತಿ ಪಿರೇರಾ ಊಟ ಮಾಡುತ್ತಿದ್ದರು. ಈ ವೇಳೆ ಮೇಣದ ಬತ್ತಿಯು ಆಕಸ್ಮಿಕ ವಾಗಿ ಮೈಮೇಲೆ ಬಿದ್ದು ಮೊಂತಿ ಪಿರೇರಾ ಧರಿಸಿದ ನೈಟಿಗೆ ಬೆಂಕಿ ತಗುಲಿ ಸುಟ್ಟ ಗಾಯವಾಗಿತ್ತು.

ಗಂಭೀರ ಸ್ಥಿತಿಯಲ್ಲಿದ್ದ ಇವರು, ಅ.22ರಂದು ನಸುಕಿನ ವೇಳೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾಯಾಗದೆ ಮೃತಪಟ್ಟರು. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News