ಕೃಷಿ ಸ್ಪರ್ಧೆಗೆ ಅರ್ಜಿ ಆಹ್ವಾನ

Update: 2023-09-13 15:39 GMT

ಉಡುಪಿ, ಸೆ.13: 2023-24ನೇ ಸಾಲಿನ ಮುಂಗಾರು ಹಂಗಾಮಿನ ಕೃಷಿ ಪ್ರಶಸ್ತಿ ಸ್ಪರ್ಧೆಗೆ ಹೆಸರು ನೋಂದಾಯಿಸಲು ನೋಂದಣಿ ದಿನಾಂಕವನ್ನು ಸೆ.15ರವರೆಗೆ ವಿಸ್ತರಿಸಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಭತ್ತದ ಬೆಳೆಯಲ್ಲಿ ರೈತರು ಹಾಗೂ ರೈತ ಮಹಿಳೆಯರು ವಿವಿಧ ಹಂತದ ಬೆಳೆ ಸ್ಪರ್ಧೆಗೆ ಗುರುತಿನ ಚೀಟಿ ಮತ್ತು ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಗಳೊಂದಿಗೆ ಅರ್ಜಿಯನ್ನು ಸೆ.15 ರೊಳಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಕೃಷಿ ಅಧಿಕಾರಿಗಳು ಅಥವಾ ತಾಲೂಕು ಸಹಾಯಕ ಕೃಷ್ಣ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News