ಆ.19: ಪ್ರತಿಕೋದ್ಯಮ ವಿದ್ಯಾರ್ಥಿಗಳಿಗೆ ಫೋಟೋಗ್ರಫಿ ಕಾರ್ಯಾಗಾರ

Update: 2023-08-16 16:11 GMT

ಉಡುಪಿ, ಆ.16: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ರಜತ ಮಹೋತ್ಸವ ಸಮಿತಿ ಹಾಗೂ ಪತ್ರಿಕಾ ಭವನ ಸಮಿತಿ ಗಳ ಸಹಯೋಗದೊಂದಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯ ಇದರ ಪ್ರಾಯೋಜಕತ್ವದಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆ ಪ್ರಯುಕ್ತ ಜಿಲ್ಲೆಯ ಪ್ರತಿಕೋದ್ಯಮ ವಿದ್ಯಾರ್ಥಿ ಗಳಿಗೆ ಫೋಟೋಗ್ರಫಿ ಕಾರ್ಯಾಗಾರವನ್ನು ಆ.19ರಂದು ಬೆಳಗ್ಗೆ 10 ಗಂಟೆಗೆ ಉಡುಪಿ ನಾಯರ್‌ಕೆರೆಯ ಐಎಂಎ ಭವನದಲ್ಲಿ ಆಯೋಜಿಸಲಾಗಿದೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಕಾರ್ಯಾಗಾರ ವನ್ನು ಮಲ್ಪೆ ಕರಾವಳಿ ಕಾವಲು ಪೊಲೀಸ್ ಅಧೀಕ್ಷಕ ಅಬ್ದುಲ್ ಅಹದ್ ಉದ್ಘಾಟಿಸಲಿರುವರು. ಛಾಯಾಚಿತ್ರ ಪ್ರದರ್ಶನ ವನ್ನು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯ ಅಧ್ಯಕ್ಷ ಜನಾರ್ದನ ಕೊಡವೂರು, ಹಳೆ ಕ್ಯಾಮೆರಾಗಳ ಪ್ರದರ್ಶನವನ್ನು ಉದ್ಯಮಿ ಶ್ರೀಶ ನಾಯಕ್ ಪೆರ್ಣಂಕಿಲ ಉದ್ಘಾಟಿಸಲಿರುವರು ಎಂದರು.

ಫೋಟೋಗ್ರಫಿ ಕಾರ್ಯಾಗಾರವನ್ನು ಉಡುಪಿಯ ಹಿರಿಯ ಛಾಯಾಚಿತ್ರ ಪತ್ರಕರ್ತ ಅಸ್ಟ್ರೋ ಮೋಹನ್, ನುಡಿಚಿತ್ರ ಕಾರ್ಯಾಗಾರವನ್ನು ಮಂಗಳೂರಿನ ಹಿರಿಯ ಪತ್ರಕರ್ತ ಸುಶೀಲೇಂದ್ರ ಕುಡುಪಾಡಿ ನಡೆಸಿ ಕೊಡಲಿದ್ದಾರೆ. ಅಧ್ಯಕ್ಷತೆ ಯನ್ನು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಲಿದ್ದಾರೆ.

ಕಾರ್ಯಾಗಾರದಲ್ಲಿ ಉಡುಪಿ ಅಜ್ಜರಕಾಡು ಮಹಿಳಾ ಪ್ರಥಮ ದರ್ಜೆ ಕಾಲೇಜು, ಉಡುಪಿ ಎಂಜಿಎಂ ಕಾಲೇಜು, ಕಾರ್ಕಳ ಎಂಪಿಎಂ ಕಾಲೇಜು ಮತ್ತು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ 50ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಲಿರುವರು.

ಛಾಯಾಚಿತ್ರ ಪ್ರದರ್ಶನದಲ್ಲಿ ನಮ್ಮ ಸಂಘದ ಸದಸ್ಯರು ತೆಗೆದ 20ಕ್ಕೂ ಅಧಿಕ ಛಾಯಾಚಿತ್ರಗಳನ್ನು ಪ್ರದರ್ಶಿಸಲಾ ಗುತ್ತದೆ. ಅಲ್ಲದೆ ಸಂಘದ ಸದಸ್ಯರ ಸಂಗ್ರಹದಲ್ಲಿರುವ ಹಳೆಯ ವಿಡಿಯೋ ಹಾಗೂ ಫೋಟೋ ಕ್ಯಾಮೆರಾಗಳನ್ನು ಪ್ರದರ್ಶಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ರಜತ ಮಹೋತ್ಸವ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್, ಪ್ರಧಾನ ಕಾರ್ಯದರ್ಶಿ ಜಯಕರ ಸುವರ್ಣ, ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಉಡುಪಿ ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಜಿತ್ ಆರಾಡಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News