ಆ.25: ಕೊರಗ ಸಮುದಾಯದಿಂದ ರಕ್ತದಾನ ಶಿಬಿರ

Update: 2024-08-22 15:58 GMT

ಕುಂದಾಪುರ, ಆ.22: ಕೊರಗ ಶ್ರೇಯೋಭಿವೃದ್ಧಿ ಸಂಘ ಕುಂದಾಪುರ, ಪರಿಶಿಷ್ಟ ಗೆಳೆಯರು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಹಾಗೂ ದಕ್ಷಿಣಕನ್ನಡ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರದ ಸಹಯೋಗ ದಲ್ಲಿ ಕೊರಗ ಸಮುದಾಯದ ಯುವಕ- ಯುವತಿಯರಿಂದ ಬೃಹತ್ ರಕ್ತದಾನ ಶಿಬಿರವು ಆ.25ರ ರವಿವಾರ ಕುಂಭಾಶಿ ಮಕ್ಕಳ ಮನೆಯಲ್ಲಿ ನಡೆಯಲಿದೆ.

ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ (ಐ.ಟಿ.ಡಿ.ಪಿ) ಉಡುಪಿ, ಹುಭಾಷಿಕ ಕೊರಗರ ಯುವ ಕಲಾವೇದಿಕೆ ರಂಗನಕೆರೆ-ಬಾರ್ಕೂರು, ಮಹಾತ್ಮಾ ಜ್ಯೋತಿ ಬಾಫುಲೆ ಯುವ ವೇದಿಕೆ ಬೈಂದೂರು, ಕೊರಗ ತನಿಯ ಯುವ ಕಲಾ ವೇದಿಕೆ ಮರವಂತೆ ಸಹಕಾರದಲ್ಲಿ ಈ ರಕ್ತದಾನ ಶಿಬಿರ ನಡೆಯಲಿದ್ದು ಮೂಲನಿವಾಸಿಗಳಾದ ಕೊರಗ ಸಮುದಾಯದಿಂದ ಇದೇ ಮೊದಲ ಬಾರಿಗೆ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಾಲೂಕು ಕೊರಗ ಶ್ರೇಯೋಭಿವೃದ್ಧಿ ಸಂಘದ ಗಣೇಶ್ ಕುಂದಾಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News