ಬೈಂದೂರು: ನಿರ್ಮಾಣ ಹಂತದ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

Update: 2024-02-20 07:47 GMT

ಬೈಂದೂರು, ಫೆ.20: ನಿರ್ಮಾಣ ಹಂತದ ಬಾವಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಲ್ಲಿಗೆ ಸಮೀಪದ ಬಡಾಕೆರೆ ಎಂಬಲ್ಲಿ ಫೆ.19 ಸೋಮವಾರ ರಾತ್ರಿ ವೇಳೆ ನಡೆದಿದೆ.

ಮೃತರನ್ನು ಬಡಾಕೆರೆಯ ವಿಜಯ ಪೂಜಾರಿ(60) ಎಂದು ಗುರುತಿಸಲಾಗಿದೆ. ಇವರು ರಾತ್ರಿ ವೇಳೆ ನಿರ್ಮಾಣ ಹಂತದ 35 ಅಡಿ ಆಳದ ನೀರಿಲ್ಲದ ಬಾವಿಗೆ ಅಕಸ್ಮಿಕವಾಗಿ ಬಿದ್ದಿದ್ದಾರೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಅವರು ಸ್ಥಳ ದಲ್ಲಿಯೇ ಮೃತಪಟ್ಟರೆಂದು ತಿಳಿದುಬಂದಿದೆ.

ಮಂಗಳವಾರ ಬೆಳಗ್ಗೆ ಈ ಬಗ್ಗೆ ಮಾಹಿತಿ ದೊರೆತಿದ್ದು, ಸಾಮಾಜಿಕ ಕಾರ್ಯಕರ್ತ ಸುರೇಶ್ ಖಾರ್ವಿ ಕೊಡೇರಿ ಬಾವಿಗೆ ಇಳಿದು ಮೃತದೇಹವನ್ನು ಮೇಲಕ್ಕೆತ್ತಿದರು. ಗಂಗೊಳ್ಳಿ 24x7 ಅಂಬ್ಯುಲೆನ್ಸ್ ತಂಡದ ಇಬ್ರಾಹಿಂ ಗಂಗೊಳ್ಳಿ, ಬಾಬ್ಬ, ಅಬರಾರ್, ಕೃಷ್ಣ, ಭರತ್ ಹರಿಕಾಂತ, ಆದಿಲ್ ಅವರು ಮೃತದೇಹವನ್ನೆತ್ತಲು ಸಹಕರಿಸಿದರು.

ಸ್ಥಳಕ್ಕೆ ಬೈಂದೂರು ಠಾಣಾ ಪೊಲೀಸರು ಆಗಮಿಸಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News