ಹಿಂದೂ ಹೆಣ್ಣು ಮಕ್ಕಳ ತಂಟೆಗೆ, ಮೈ ಮುಟ್ಟಲು ಬಂದ ಪೊರ್ಕಿ ಮುಂಡು ಬ್ಯಾರಿಗಳೇ ಹುಷಾರ್!!!

Update: 2024-09-02 17:20 GMT

ಕಾರ್ಕಳ : ಹಿಂದೂ ಹೆಣ್ಣು ಮಕ್ಕಳ ತಂಟೆಗೆ, ಮೈ ಮುಟ್ಟಲು ಬಂದ ಪೊರ್ಕಿ ಮುಂಡು ಬ್ಯಾರಿಗಳೇ ಹುಷಾರ್!!! ಜಾಗ್ರತೆ ಎಂದು ಸತೀಶ್, ಒನ್ ಆಫ್ ದಿ ಫ್ರೀಡಂ ಫೈಟರ್ ಎಂಬ ಹೆಸರಿನಲ್ಲಿ ಸಾಣೂರು ಗ್ರಾಮದ ಕಮಲಾಕ್ಷ ನಗರ ಎಂಬಲ್ಲಿ ಕಿಡಿಗೇಡಿಗಳು ಬ್ಯಾನರ್ ಅಳವಡಿಸಿದ್ದಾರೆ.

ಸಮಾಜದಲ್ಲಿ ಸಾಮರಸ್ಯ ಕದಡುವ ಪ್ರಯತ್ನ ನಡೆಸುತ್ತಿರುವ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.

ಕಾರ್ಕಳ ಸಾಣೂರು ಗ್ರಾಮದ ಮುರತಂಗಡಿ ಕಮಲಾಕ್ಷ ನಗರ ಎಂಬಲ್ಲಿ ಅಳವಡಿಸಿರುವ ಬ್ಯಾನರ್‌ ನಲ್ಲಿ ಮುದ್ರಣಗೊಂಡ ಹೆಸರಿನ ಸುಮಾರು 50 ವರ್ಷದ ವ್ಯಕ್ತಿ ಕೂಲಿ ಕಾರ್ಮಿಕನಾಗಿದ್ದು, ಕಳೆದ ಐದಾರು ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಈತನನ್ನು ಹೆಂಡತಿ ಮಕ್ಕಳು ಬಿಟ್ಟು ಹೋಗಿದ್ದಾರೆ. ಈತ ತನ್ನ ತಮ್ಮಂದಿರೊಂದಿಗೆ ವಾಸವಾಗಿದ್ದು, ಇಂತಹ ಕೃತ್ಯ ನಡೆಸಲು ಸಾಧ್ಯವಿಲ್ಲ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಯಾರೋ ಈತನ ಹೆಸರಿನಲ್ಲಿ ಬ್ಯಾನರ್ ಹಾಕಿರಬಹುದು ಅಥವಾ ಮಾನಸಿಕ ಅಸ್ವಸ್ಥತೆಯನ್ನು ಬಳಸಿಕೊಂಡು ಸಮಾಜದಲ್ಲಿ ಶಾಂತಿ ಕಡದುವಂತ ಪ್ರಯತ್ನ ನಡೆಸಿರಬಹುದೆಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಾರ್ಕಳ ಸಾಣೂರು ಮುರತಂಗಡಿ, ಕಮಲಾಕ್ಷ ನಗರ ಪರಿಸರದಲ್ಲಿ ಎಲ್ಲ ಜಾತಿ ಧರ್ಮದ ಜನರು ಸೌಹಾರ್ದತೆಯಿಂದ ಬದುಕುತಿದ್ದು, ಈ ಪರಿಸರದ ಸಾಮರಸ್ಯ, ಸೌಹಾರ್ದತೆ, ಕದಡುವ ಪ್ರಯತ್ನ ಇದಾಗಿದ್ದು ಇದನ್ನು ಮೂಲದಲ್ಲಿ ಚಿವುಟಿ ಹಾಕಿ ಕಾರ್ಕಳ ಯಾವತ್ತೂ ಸೌಹಾರ್ದತೆಯ ಕೇಂದ್ರ ಎಂದು ಮತ್ತೊಮ್ಮೆ ಸಾಬೀತು ಪಡಿಸಬೇಕಾಗಿದೆ ಎಂದು ಸಾರ್ವಜನಿಕರ ಅಭಿಪ್ರಾಯವಾಗಿದ್ದು, ಈ ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News