ಬೈಕ್ ಢಿಕ್ಕಿ: ಪಾದಚಾರಿ ಮೃತ್ಯು

Update: 2023-10-21 16:07 GMT

ಕೋಟ, ಅ.21: ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಹಳ್ಳಾಡಿ ಹರ್ಕಾಡಿ ಗ್ರಾಮದ ಹಳ್ಳಾಡಿಗುಡ್ಡೆ ಎಂಬಲ್ಲಿರುವ ಮದಗದ ಬಳಿ ನಡೆದಿದೆ.

ಮೃತರನ್ನು ಹರ್ಕಾಡಿ ಗ್ರಾಮದ ನಂದೀಶ(33) ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಹಳ್ಳಿಹೊಳೆ ಕಡೆಗೆ ಬರುತ್ತಿದ್ದ ಬೈಕ್, ರಸ್ತೆ ಬದಿ ನಡೆದು ಕೊಂಡು ಹೋಗುತ್ತಿದ್ದ ನಂದೀಶ ಅವರಿಗೆ ಹಿಂದಿನಿಂದ ಢಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರಿಂದ ಗಾಯಗೊಂಡ ನಂದೀಶ್‌ರನ್ನು ಕ್ಲಿನಿಕ್‌ನಲ್ಲಿ ಚಿಕಿತ್ಸೆ ಕೊಡಿಸಿ ಮನೆಗೆ ಕರೆದುಕೊಂಡು ಹೋಗಿದ್ದಾರೆನ್ನಲಾಗಿದೆ. ರಾತ್ರಿ ಮನೆಯಲ್ಲಿ ಮಲಗಿದ್ದ ನಂದೀಶ್, ಬೆಳಗ್ಗೆ ಏಳದೇ ಮಲಗಿದ್ದಲ್ಲಿಯೇ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News