ಬೈಕ್ ಢಿಕ್ಕಿ: ಪಾದಚಾರಿ ಮಹಿಳೆ ಮೃತ್ಯು

Update: 2024-09-18 15:17 GMT

ಶಂಕರನಾರಾಯಣ, ಸೆ.18: ಬೈಕ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸೆ.17ರಂದು ರಾತ್ರಿ ನಡೆದಿದೆ.

ಮೃತರನ್ನು ಹಿಲಿಯಾಣ ಗ್ರಾಮದ ಗುಲಾಬಿ ಎಂದು ಗುರುತಿಸಲಾಗಿದೆ. ಇವರು ಹಿಲಿಯಾಣ ಗ್ರಾಮದ ಬಂಡಸಾಲೆ ಎಂಬಲ್ಲಿರುವ ಭದ್ರಕಾಳಿ ದೇವಸ್ಥಾನಕ್ಕೆ ಹೋಗಿ ರಾತ್ರಿ ವಾಪಾಸ್ಸು ಮನೆಗೆ ಬರುತ್ತಿದ್ದು, ಕೋಟಾ-ಗೋಳಿ ಯಂಗಡಿ ಕಡೆಗೆ ಹೋಗುವ ರಸ್ತೆಯನ್ನು ದಾಟುತ್ತಿದ್ದಾಗ ವಂಡಾರು- ಮಾವಿನಕಟ್ಟೆ ಕಡೆಯಿಂದ ಬಂದ ಬೈಕ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಗುಲಾಬಿ ಬ್ರಹ್ಮಾವರ ಸಮುದಾಯ ಆರೊಗ್ಯ ಕೇಂದ್ರಕ್ಕೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News