ಬೈಕ್ ಸವಾರ ಹೃದಯಾಘಾತದಿಂದ ಮೃತ್ಯು

Update: 2024-09-17 15:57 GMT

ಮಣಿಪಾಲ: ಬೈಕಿನಲ್ಲಿ ಹೋಗುತ್ತಿದ್ದ ಸವಾರರೊಬ್ಬರು ಹೃದಯಾ ಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಸೆ.17ರಂದು ಬೆಳಗ್ಗೆ ಅಲೆವೂರು ಗ್ರಾಮದ ಮಂಚಿಕೆರೆ ಎಂಬಲ್ಲಿ ನಡೆದಿದೆ.

ಮೃತರನ್ನು ಹಿರಿಯಡ್ಕದ ರಾಘವೇಂದ್ರ (49) ಎಂದು ಗುರುತಿಸಲಾಗಿದೆ. ಪೌರೋಹಿತ್ಯ ಕೆಲಸ ಮಾಡಿಕೊಂಡಿದ್ದ ಇವರು ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಹೃದಯ ಸ್ತಂಭನಗೊಂಡು ಬೈಕ್ ಸಮೇತ ರಸ್ತೆಗೆ ಬಿದ್ದರೆನ್ನಲಾಗಿದೆ. ಇದರಿಂದ ತೀವ್ರವಾಗಿ ಅಸ್ವಸ್ಥಗೊಂಡ ಅವರು ಉಡುಪಿ ಸರಕಾರಿ ಆಸ್ಪತ್ರೆಗೆ ಕರೆದು ಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News