ಬೈಕ್ -ಸ್ಕೂಟರ್ ಢಿಕ್ಕಿ: ಓರ್ವ ಸವಾರ ಮೃತ್ಯು, ಇಬ್ಬರಿಗೆ ಗಾಯ

Update: 2023-12-02 14:59 GMT

ಶಂಕರನಾರಾಯಣ, ಡಿ.2: ಬೈಕಿಗೆ ಸ್ಕೂಟರೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನ.30ರಂದು ಮಧ್ಯರಾತ್ರಿ ವೇಳೆ ಆಜ್ರಿ ಗ್ರಾಮದ ಗೋರಿಜಡ್ಡು ಎಂಬಲ್ಲಿ ನಡೆದಿದೆ.

ಮೃತರನ್ನು ಹಳ್ಳಿಹೊಳೆ ಗ್ರಾಮದ ಮಂಜುನಾಥ (36) ಎಂದು ಗುರುತಿಸ ಲಾಗಿದೆ. ಸ್ಕೂಟರ್ ಸವಾರ ಮನೋಜ್ ಮತ್ತು ಸಹ ಸವಾರ ಶಶಿಕಾಂತ್ ಗಾಯಗೊಂಡು ಕೋಟೇಶ್ವರದ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಿದ್ದಾಪುರ -ಹಳ್ಳಿಹೊಳೆ ರಸ್ತೆಯಲ್ಲಿ ಹಳ್ಳಿಹೊಳೆ ಕಡೆಗೆ ಹೋಗುತ್ತಿದ್ದ ಬೈಕಿಗೆ ಕಮಲಶಿಲೆ ಕಡೆಯಿಂದ ಸಿದ್ದಾಪುರ ಕಡೆಗೆ ಬರುತ್ತಿದ್ದ ಸ್ಕೂಟರ್ ಢಿಕ್ಕಿ ಹೊಡೆದು, ನಿಲ್ಲಿಸದೇ ಪರಾರಿಯಾದರೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರ ವಾಗಿ ಗಾಯಗೊಂಡ ಬೈಕ್ ಸವಾರ ಮಂಜುನಾಥ್, ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News