ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿಯ ಪ್ರಬಲ ಆಕಾಂಕ್ಷಿ: ಪ್ರಮೋದ್ ಮಧ್ವರಾಜ್

Update: 2023-08-05 15:27 GMT

ಉಡುಪಿ, ಆ.5: ಮುಂದಿನ ಲೋಕಸಭಾ ಚುನಾವಣೆಗೆ ಸಾಮಾಜಿಕ ನ್ಯಾಯದಡಿ ಬಿಜೆಪಿ ಪಕ್ಷದಿಂದ ಚಿಕ್ಕಮಗಳೂರು- ಉಡುಪಿ ಲೋಕಸಭಾ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.

ಉಡುಪಿಯಲ್ಲಿ ಶನಿವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಬಿಜೆಪಿ ಪಕ್ಷವನ್ನು ತ್ಯಜಿಸುವ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಆದರೆ ನಾನು ರಾಜಕೀಯ ನಿವೃತ್ತಿ ಅಥವಾ ನನ್ನ ದೇಹ ಅಂತ್ಯವಾಗುವವರೆಗೆ ಬಿಜೆಪಿ ಯಲ್ಲಿ ಕಾರ್ಯಕರ್ತನಾಗಿರುತ್ತೇನೆ. ಅಲ್ಲಿಯವರೆಗೆ ನಾನು ಬಿಜೆಪಿಯಲ್ಲೇ ಮುಂದುವರಿಯುತ್ತೇನೆ ಎಂದು ಸ್ಪಷ್ಟಪಡಿಸಿದರು.

ಲೋಕಸಭಾ ಚುನಾವಣೆಗೆ ಈ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯನ್ನಾಗಿ ನನ್ನನ್ನೇ ಆಯ್ಕೆ ಮಾಡುವ ಪೂರ್ಣ ವಿಶ್ವಾಸ ಇಲ್ಲ. ಈ ಬಗ್ಗೆ ಯಾವುದೇ ಮುಖಂಡರು ಕೂಡ ಸ್ಪಷ್ಟ ಭರವಸೆ ಕೊಟ್ಟಿಲ್ಲ. ಎಲ್ಲ ನಾಯಕರ ವಿಶ್ವಾಸ ಪಡೆದು ಸ್ಪರ್ಧೆಗೆ ಇಳಿಯುತ್ತೇನೆ. ಒಂದು ವೇಳೆ ಟಿಕೆಟ್ ತಪ್ಪಿಇನ್ನೊಬ್ಬರಿಗೆ ಟಿಕೆಟ್ ಸಿಕ್ಕರೂ ಅತ್ಯಂತ ಪ್ರಾಮಾಣಿಕವಾಗಿ ಅವರ ಗೆಲುವಿಗೆ ಶ್ರಮಿಸುತ್ತೇನೆ ಎಂದರು.

ಪಕ್ಷ ಈವರೆಗೆ ನನಗೆ ಯಾವುದೇ ಪ್ರಮುಖ ಜವಾಬ್ದಾರಿ ಕೊಟ್ಟಿಲ್ಲ. ಆದರೆ ಪಕ್ಷದ ಕೆಲಸಕ್ಕೆ ತೊಡಗಿಸಿಕೊಳ್ಳಲು ಸೂಚನೆ ಕೊಟ್ಟಿದೆ. ರಾಜ್ಯದ ನಾನಾ ಕಡೆಗಳಲ್ಲಿ ಎಂಎಲ್‌ಎ ಚುನಾವಣೆಗೆ ಪ್ರಚಾರ ಅಳಿಲು ಸೇವೆ ಮಾಡಿದ್ದೇನೆ. ನಾನು ಶಾಸಕ ನಾಗಿದ್ದಾಗ ಉಡುಪಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯಾಗಿದೆ. ಶಿಕ್ಷಣ ಮತ್ತು ಆರೋಗ್ಯದಲ್ಲಿ ಪ್ರಗತಿ ಸಾಧಿಸಿದಲ್ಲದೆ ಕಾನೂನು ಸುವ್ಯವಸ್ಥೆ ಕೂಡ ಉತ್ತಮ ವಾಗಿತ್ತು ಎಂದು ಅವರು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News