ಬಸ್ ಢಿಕ್ಕಿ: ಪಾದಚಾರಿ ಮೃತ್ಯು

Update: 2023-07-27 16:20 GMT

ಕಾಪು, ಜು.27: ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಜು.26ರಂದು ರಾತ್ರಿ ವೇಳೆ ಮೂಳೂರಿನ ಮಿರ್ಚಿ ಹೋಟೇಲ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಮೃತರನ್ನು ಸುರತ್ಕಲ್‌ನ ಚಂದ್ರಶೇಖರ್(59) ಎಂದು ಗುರುತಿಸಲಾಗಿದೆ. ಕಾಪುವಿನ ಮಾರಿಪೂಜೆ ಪ್ರಯುಕ್ತ ಮೂಳೂರಿನಲ್ಲಿರುವ ಸಹೋದರನ ಮನೆಗೆ ಬಂದಿದ್ದ ಇವರು, ಸುರತ್ಕಲ್‌ಗೆ ಹೋಗಲು ರಸ್ತೆ ದಾಟಲು ನಿಂತಿರುವಾಗ, ಉಡುಪಿ ಕಡೆಯಿಂದ ಉಚ್ಚಿಲ ಕಡೆಗೆ ಹೋಗುತ್ತಿದ್ದ ಬಸ್ ಢಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದು ಬಂದಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News