ಬೈಂದೂರು: ಮನೆಗೆ ನುಗ್ಗಿ ಚಿನ್ನಾಭರಣ ಕಳವು

Update: 2023-11-23 15:55 GMT

ಸಾಂದರ್ಭಿಕ ಚಿತ್ರ

ಬೈಂದೂರು, ನ.23: ಇಲ್ಲಿನ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.

ಮುಹಮ್ಮದ್ ಜಕ್ರಿಯಾ ಕುಟುಂಬ ಸಮೇತ ಶಾರ್ಜದಲ್ಲಿ ವಾಸವಾಗಿದ್ದು. ಆಗಾಗ ಊರಿಗೆ ಬಂದು ಹೋಗುತ್ತಿದ್ದರು. ನ.19ರಂದು ಸಂಜೆಯಿಂದ ನ.22ರ ಬೆಳಗಿನ ಮಧ್ಯಾವಧಿಯಲ್ಲಿ ಹಿಂಬದಿಯ ಬಾಗಿಲನ್ನು ಮುರಿದು ಒಳನುಗ್ಗಿದ ಕಳ್ಳರು, ಕಪಾಟಿನ ಲಾಕರ್‌ನಲ್ಲಿ ಇಟ್ಟಿದ್ದ 5,00,000ರೂ. ಮೌಲ್ಯದ ಚಿನ್ನವನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News