ಬೈಂದೂರು | ಡಿವೈಡರ್ ಗೆ ಢಿಕ್ಕಿಯಾಗಿ ಲಾರಿ ಪಲ್ಟಿ: ಇಬ್ಬರಿಗೆ ಗಂಭೀರ ಗಾಯ

Update: 2023-11-22 05:00 GMT

ಕುಂದಾಪುರ, ನ.22: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಡಿವೈಡರ್ ಗೆ ಢಿಕ್ಕಿ ಹೊಡೆದು ಇನ್ನೊಂದು ಬದಿಯ ರಸ್ತೆಗೆ ಉರುಳಿಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬೈಂದೂರು ಸಮೀಪದ ಉಪ್ಪುಂದ ಶಾಲೆಬಾಗಿಲು ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಹಾಗೂ ನಿರ್ವಾಹಕ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ಗಾಯಗೊಂಡ ಚಾಲಕನನ್ನು ನಾಯ್ಕನಕಟ್ಟೆ ನಿವಾಸಿ ವಿಶ್ವನಾಥ್ (32) ಎಂದು ಗುರುತಿಸಲಾಗಿದ್ದು, ಇನ್ನೊಬ್ಬನ ಬಗ್ಗೆ ಮಾಹಿತಿ ಲಭಿಸಿಲ್ಲ ಅವರಿಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಂದೂರಿನಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ 407 ಲಾರಿ ಶಾಲೆಬಾಗಿಲು ಎಂಬಲ್ಲಿ ಬರುತ್ತಿದ್ದಂತೆ ತಿರುವು ಇರುವ ಸ್ಥಳಕ್ಕೆ ಸಮೀಪದಲ್ಲಿ ಹೆದ್ದಾರಿ ನಡುವೆ ಇರುವ ಡಿವೈಡರ್ ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿ ಎದುರಿನ ರಸ್ತೆಗೆ ಬಿದ್ದಿದೆ. ಈ ಸಂದರ್ಭ ಮಂಗಳೂರಿನಿಂದ ಬೆಳಗಾವಿಗೆ ಸರಕು ಸಾಗಿಸುತ್ತಿದ್ದ ಇನ್ನೊಂದು ಲಾರಿ ಬೈಂದೂರು ಕಡೆಗೆ ಚಲಿಸುತ್ತಿದ್ದು ಅದಕ್ಕೂ ಢಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ 407 ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಬೈಂದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

 

 

 

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News