ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2023-08-17 14:52 GMT

ಉಡುಪಿ, ಆ.17: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆಯ ಅಂಗವಾಗಿ, ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6ರಿಂದ 18 ವರ್ಷದೊಳಗಿನ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಪ್ರಕರಣವು 2022ರ ಆಗಸ್ಟ್ 1ರಿಂದ 2023ರ ಜುಲೈ 31ರೊಳಗೆ ನಡೆದಿರಬೇಕು. 2005ರ ಆಗಸ್ಟ್ 1ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ 10,000ರೂ. ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು.

ಅರ್ಜಿ ಸಲ್ಲಿಸಲು ಸೆಪ್ಟಂಬರ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 204, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ 0820-2574978 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಜಿಲ್ಲಾ ಪ್ರಶಸ್ತಿಗೆ ಅರ್ಜಿ ಆಹ್ವಾನ: ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ 5ರಿಂದ 18 ವರ್ಷದೊಳಗಿನ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಆಯ್ಕೆಯಾದ ಪ್ರತಿ ಮಗುವಿಗೆ ತಲಾ 10000 ರೂ. ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ, ದೂರವಾಣಿ ಸಂಖ್ಯೆ 0820-2574978 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News