ಕಾರು ಢಿಕ್ಕಿ: ಪಾದಚಾರಿ ಮೃತ್ಯು

Update: 2023-08-21 15:39 GMT

ಕಾರ್ಕಳ, ಆ.21: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಆ.20ರಂದು ರಾತ್ರಿ 10.15ರ ಸುಮಾರಿಗೆ ಬೆಳ್ಮಣ್ ಪೇಟೆಯಲ್ಲಿರುವ ಗಣೇಶ್ ಕ್ಲೀನಿಕ್ ಎದುರು ನಡೆದಿದೆ.

ಕಾರ್ಕಳ ಕಡೆಯಿಂದ ಪಡುಬಿದ್ರಿ ಕಡೆಗೆ ಹೋಗುತ್ತಿದ್ದ ಡಾ.ಪ್ರದೀಪ ಕಿಣಿ ಎಂಬವರ ಕಾರು ರಸ್ತೆಯನ್ನು ದಾಟುತ್ತಿದ್ದ ವ್ಯಕ್ತಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಕಾರ್ಕಳದ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News