ಕಾರು ಢಿಕ್ಕಿ: ಸ್ಕೂಟರ್ ಸವಾರ ಮೃತ್ಯು

Update: 2023-11-04 12:00 GMT

ಉಡುಪಿ: ಅಂಬಾಗಿಲು ಜಂಕ್ಷನ್ ಸಮೀಪದ ಅರ್ಪಿತಾ ಟ್ರೇಡರ್ಸ ಎದುರುಗಡೆ ನಡೆದ ಅಪಘಾತದಲ್ಲಿ ಗಂಭೀರ ವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು ಶ್ರೀನಿವಾಸ(83) ಎಂದು ಗುರುತಿಸಲಾಗಿದೆ. ಇವರು ನ.2ರಂದು ಮಧ್ಯಾಹ್ನ ತನ್ನ ಸ್ಕೂಟರ್‌ನಲ್ಲಿ ಪುತ್ತೂರು ದೇವಸ್ಥಾನಕ್ಕೆ ಹೋಗಿ ವಾಪಾಸು ಮನೆಗೆ ಬರುತ್ತಿದ್ದು, ಈ ವೇಳೆ ಹಿಂದಿನಿಂದ ಬಂದ ಕಾರು, ಸ್ಕೂಟರ್‌ಗೆ ಢಿಕ್ಕಿ ಹೊಡೆಯಿ ತ್ತೆನ್ನಲಾಗಿದೆ. ಇದರ ಪರಿಣಾಮ ಶ್ರೀನಿವಾಸ್, ಸ್ಕೂಟರ್ ಸಮೇತ ರಸ್ತೆಗೆ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನ.3ರಂದು ಮದ್ಯಾಹ್ನ ಮೃತಪಟ್ಟರು ಎಂದು ತಿಳಿದುಬಂದಿದೆ.

ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News