ಕಾಂಗ್ರೆಸ್ ಮುಖಂಡ ಯಜೇಶ್ ಆಚಾರ್ಯ ನಿಧನ

Update: 2023-11-06 15:08 GMT

ಉಡುಪಿ: ಕಾಂಗ್ರೆಸ್ ಮುಖಂಡ, ಮಾಹಿತಿ ಹಕ್ಕುಗಳ ಕಾರ್ಯಕರ್ತ ಯಜೇಶ್ ಆಚಾರ್ಯ ಕೊಡವೂರು (53) ಅಲ್ಪಕಾಲದ ಅಸೌಖ್ಯದಿಂದ ಇಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಉಡುಪಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಒಳಕಾಡು ಸರಕಾರಿ ಶಾಲೆಯ ಅಭಿವೃದ್ಧಿ ಸಮಿತಿಯಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News