ಕಂಟೈನರ್ ಲಾರಿ ಢಿಕ್ಕಿ: ಪಾದಚಾರಿ ಮೃತ್ಯು

Update: 2023-07-24 14:50 GMT

ಉಡುಪಿ, ಜು.24: ಕಂಟೈನರ್ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಪುತ್ತೂರು ಗ್ರಾಮದ ನಿಟ್ಟೂರು ಕಾಂಚನ್ ಹುಂಡೈ ಶೋ ರೂಮ್‌ನ ಎದುರು ರಾ.ಹೆ 66ರಲ್ಲಿ ಜು.23ರಂದು ರಾತ್ರಿ 10.25ರ ಸುಮಾರಿಗೆ ನಡೆದಿದೆ.

ಮೃತರನ್ನು ನಿಟ್ಟೂರಿನ ರಮೇಶ್ ಪೂಜಾರಿ(60) ಎಂದು ಗುರುತಿಸಲಾಗಿದೆ. ಕರಾವಳಿ ಬೈಪಾಸ್ ಕಡೆಯಿಂದ ಕುಂದಾಪುರದ ಕಡೆಗೆ ಹೋಗುತ್ತಿದ್ದ ಕಂಟೈನರ್ ಗೂಡ್ಸ್ ಲಾರಿಯು ರಸ್ತೆ ದಾಟುತ್ತಿದ್ದ ರಮೇಶ್ ಪೂಜಾರಿಗೆ ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ರಸ್ತೆಗೆ ಬಿದ್ದ ರಮೇಶ್ ಪೂಜಾರಿ ಮೇಲೆ ಲಾರಿಯ ಚಕ್ರ ಹರಿಯಿತ್ತೆನ್ನಲಾಗಿದೆ.

ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದು ಬಂದಿದೆ. ಅಪಘಾತಪಡಿಸಿದ ವಾಹನದ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News