ಉಡುಪಿಯಲ್ಲಿ ಮುಂದುವರಿದ ಮಳೆಯ ಆರ್ಭಟ: ಕರಂಬಳ್ಳಿಯಲ್ಲಿ ಹಲವು ಮನೆಗಳು ಜಲಾವೃತ

Update: 2024-07-08 02:45 GMT

ಉಡುಪಿ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಉಡುಪಿ ನಗರಸಭೆ ವ್ಯಾಪ್ತಿಯ ಕರಂಬಳ್ಳಿ ವೆಂಕಟರಮಣ ಲೇಔಟ್ ನ ಹಲವು ಮನೆಗಳು ಜಲಾವೃತಗೊಂಡಿರುವ ಬಗ್ಗೆ ವರದಿಯಾಗಿದೆ.

ಭಾರಿ ಮಳೆಯಿಂದ ಇಲ್ಲಿಗೆ ಸಮೀಪ ದಲ್ಲಿರುವ ತೋಡು ತುಂಬಿ ಹರಿಯುತ್ತಿದ್ದು ಇದರಿಂದ ಈ ಪರಿಸರದ ಹತ್ತಾರು ಮನೆಗಳು ಜಲಾವೃತಗೊಂಡಿದೆ ಮನೆ ಎದುರಿನ ಅಂಗಳದಲ್ಲಿ ನಿಲ್ಲಿಸಲಾದ ಬೈಕ್‌, ಕಾರುಗಳು ಕೂಡ ನೀರು ಪಾಲಾಗುತ್ತಿದೆ. ಈ ಮನೆಗಳ ಮಕ್ಕಳು ಶಾಲೆಗೆ ತೆರಳಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆ ಕೂಡ ಜಲಾವೃತ ಗೊಂಡಿರುವುದರಿಂದ ವಾಹನ ಸಂಚಾರಕ್ಕೂ ಅಡ್ಡಿಯಾಗುತ್ತಿದೆ

ಉಡುಪಿ ನಗರಸಭೆ ಅಧಿಕಾರಿಗಳು ತಕ್ಷಣ ಆಗಮಿಸಿ ಪರಿಹಾರ ಕಾರ್ಯ ನಡೆಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News