ಆ.14ರಂದು ಜಿಲ್ಲಾ ಉಸ್ತುವಾರಿ ಸಚಿವೆ ಉಡುಪಿಗೆ ಭೇಟಿ

Update: 2024-08-13 16:27 GMT

ಉಡುಪಿ, ಆ.13: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್.ಹೆಬ್ಬಾಳ್ಕರ್ ಅವರು ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆ.14ರಂದು ಸಂಜೆ ಉಡುಪಿಗೆ ಆಗಮಿಸಲಿದ್ದಾರೆ.

ಸಂಜೆ 5:45ಕ್ಕೆ ಬೆಂಗಳೂರಿನಿಂದ ಹೊರಟು 6:45ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಚಿವೆ, ರಾತ್ರಿ 8:00ಗಂಟೆಗೆ ಉಡುಪಿ ತಲುಪಿ ಬನ್ನಂಜೆಯಲ್ಲಿರುವ ರಕಾರಿ ಅತಿಥಿಗೃಹದಲ್ಲಿ ವಾಸ್ತವ್ಯ ಮಾಡುವರು. ಆ.15ರಂದು ಗುರುವಾರ ಮುಂಜಾನೆ 8:30ರಿಂದ ಸ್ವಾತಂತ್ರ್ಯೋತ್ಸವದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು. ಸಂಜೆ 4:00ಗಂಟೆಗೆ ಉಡುಪಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುವರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News