ಇಸ್ಪೀಟು ಜುಗಾರಿ: ಮೂವರ ಬಂಧನ

Update: 2023-09-06 14:51 GMT

ಬೈಂದೂರು, ಸೆ.6: ತಗ್ಗರ್ಸೆ ಗ್ರಾಮದ ಗುಡ್ಡೆಯಂಗಡಿ ಎಂಬಲ್ಲಿನ ಹಾಡಿಯಲ್ಲಿ ಸೆ.5ರಂದು ಇಸ್ಪೀಟು ಜುಗಾರಿ ಆಡುತ್ತಿದ್ದ ಮೂವರನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ.

ಬಾಬಣ್ಣ ಮೊಗವೀರ(45), ದುರ್ಗ ಪೂಜಾರಿ(65), ಶೇಖರ ಪೂಜಾರಿ (38) ಬಂಧಿತ ಆರೋಪಿಗಳು. ಇವರಿಂದ 3,100ರೂ. ನಗದು ವಶಪಡಿಸಿ ಕೊಳ್ಳಲಾಗಿದೆ.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News