ಗಂಗೊಳ್ಳಿಯ ಯುವಕ ಹೃದಯಾಘಾತದಿಂದ ಸೌದಿಯಲ್ಲಿ ನಿಧನ

Update: 2024-09-25 13:57 GMT

ಗಂಗೊಳ್ಳಿ, ಸೆ.25: ಗಂಗೊಳ್ಳಿ ಜಾಮಿಯಾ ಮೊಹಲ್ಲಾ ನಿವಾಸಿ ಬಶೀರ್ ಅಹ್ಮದ್ ಎಂಬವರ ಪುತ್ರ ಮುಬಾಶೀರ್ ಬಷೀರ್ (30) ಇಂದು ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನರಾದರು.

ಎರಡು ವರ್ಷಗಳ ಹಿಂದೆ ಮಹಾರಾಷ್ಟ್ರದ ಪೂನಾ ಮೂಲದ ಯುವತಿಯನ್ನು ವಿವಾಹವಾಗಿದ್ದ ಇವರು, ಪತ್ನಿಯ ಜೊತೆಯಲ್ಲಿಯೇ ಸೌದಿಯಲ್ಲಿ ವಾಸವಾಗಿದ್ದರು. ಪ್ರಾಥಮಿಕ ಶಿಕ್ಷಣವನ್ನು ಕುಂದಾಪುರ ಎಚ್‌ಎಂಎಂ ಶಾಲೆ, ಪ್ರೌಢ ಶಿಕ್ಷಣವನ್ನು ವಿಕೆಆರ್ ಆಂಗ್ಲ ಮಾಧ್ಯಮ ಶಾಲೆ, ಪಿಯು ಶಿಕ್ಷಣವನ್ನು ಭಂಡರ್‌ಕಾರ್ಸ್‌ ಕಾಲೇಜು, ತದನಂತರ ಇಂಜಿನಿಯರಿಂಗ್ ಪದವಿಯನ್ನು ಭಟ್ಕಳದ ಅಂಜುಮನ್ ಕಾಲೇಜು ಹಾಗೂ ಚೆನ್ನೈಯ ಕಾಲೇಜಿನಲ್ಲಿ ಪಡೆದಿದ್ದರು.

ಸಮಾಜದ ತುರ್ತು ಅಗತ್ಯಗಳಿಗೆ ಸ್ಪಂದಿಸುತ್ತಿದ್ದ ಇವರು, ಬಡವರಿಗೆ ಆರ್ಥಿಕ ನೆರವು ಕೂಡ ನೀಡುತ್ತಿದ್ದರು. ಕೆಲ ಸಮಯದ ಹಿಂದೆ ಉದ್ಯೋಗಕ್ಕಾಗಿ ಇವರು ಸೌದಿಗೆ ತೆರಳಿದ್ದರು. ಇವರು ಪತ್ನಿ, ತಾಯಿ, ತಂದೆ, ಹಾಗೂ ಓರ್ವ ಸಹೋದರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ವಿಧಿವಿಧಾನಗಳ ಬಗ್ಗೆ ಸೌದಿ ದೇಶದ ಕಾನೂನೂ ಕ್ರಮಗಳ ನಂತರವೇ ತಿಳಿದು ಬರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News