ಹೆಬ್ರಿ: ಕಾರು ಢಿಕ್ಕಿ ಹೊಡೆದು ಚಿರತೆ ಸಾವು

Update: 2023-10-06 05:53 GMT

ಕಾರ್ಕಳ, ಅ.6: ಏಕಾಏಕಿ ರಸ್ತೆಗೆ ನುಗ್ಗಿದ ಚಿರತೆಯೊಂದಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ಚಿರತೆ ಸಾವಿಗೀಡಾದ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿ ಕಾರ್ಕಳ ರಸ್ತೆಯ ಭಕ್ರೆ ಮಠ ಕ್ರಾಸ್ ಬಳಿ ಗುರುವಾರ ಸಂಜೆ ನಡೆದಿದೆ.

ಕಾರ್ಕಳದಿಂದ ಮುದ್ರಾಡಿ ಕಡೆಗೆ ವೇಗವಾಗಿ ಸಂಚರಿಸುತ್ತಿದ್ದ ಕಾರು ರಸ್ತೆ ಕಡೆಗೆ ಏಕಾಏಕಿ ನುಗ್ಗಿದ ಚಿರತೆಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಅಗಮಿಸಿ ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News