ಮನೆಗೆ ನುಗ್ಗಿ ಚಿನ್ನಾಭರಣ ಕಳವು

Update: 2023-10-30 15:31 GMT

ಕುಂದಾಪುರ, ಅ.30: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.

ಕುಂದಾಪುರದ ಸುರೇಶ್ ಎಂಬವರು ಅ.27ರಂದು ರಾತ್ರಿ ಕುಟುಂಬ ಸಮೇತರಾಗಿ ಧರ್ಮಸ್ಥಳ, ಸುಬ್ರಹ್ಮಣ್ಯ ತಲಕಾವೇರಿ ದೇವಸ್ಥಾನಕ್ಕೆ ಹೋಗಿದ್ದು, ಅ.29ರಂದು ಸಂಜೆ ವಾಪಾಸು ಮನೆಗೆ ಬಂದು ನೋಡುವಾಗ ಈ ಕಳವು ಪ್ರಕರಣ ಬೆಳಕಿಗೆ ಬಂದಿದೆ.

ಮನೆಯ ಎದುರಿನ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು, ಬೆಡ್ ರೂಂನಲ್ಲಿರುವ ಕಪಾಟಿನಲ್ಲಿದ್ದ 2,34,500ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News