ಬ್ಯಾರೀಸ್ ಕಾಲೇಜಿನ ಮಾಹಿತಿ ತಂತ್ರಜ್ಞಾನ ವೇದಿಕೆ ಉದ್ಘಾಟನೆ

Update: 2023-10-07 12:52 GMT

ಕುಂದಾಪುರ, ಅ.7: ಕುಂದಾಪುರ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ಮಾಹಿತಿ ತಂತ್ರಜ್ಞಾನ ವೇದಿಕೆಯ ಉದ್ಘಾಟನಾ ಕಾರ್ಯಕ್ರಮ ಅ.6ರಂದು ಕಾಲೇಜಿನಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ರೆಹೆಮಾನ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಕೆರಾಡಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಕುಮಾರ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಸ್ಪೂರ್ತಿದಾಯಕವಾದ ಮಾತುಗಳನ್ನಾಡಿದರು.

ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ವಿಜ್ಞಾನ ಮಾದರಿಗಳನ್ನು ಹಾಗೂ ಕಂಪ್ಯೂಟರ್‌ನ ಎಲ್ಲ ಬಿಡಿಭಾಗಗಳನ್ನು ವಸ್ತು ಪ್ರದರ್ಶನದ ರೂಪದಲ್ಲಿ ಪ್ರದರ್ಶಿಸಿದರು. ಪ್ರಬಂಧ, ಚೆಸ್, ರಸಪ್ರಶ್ನೆ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು.

ಬ್ಯಾರೀಸ್ ವಿಶ್ವಸ್ಥ ಮಂಡಳಿಯ ಸದಸ್ಯ ಡಾ.ಆಸೀಫ್ ಬ್ಯಾರಿ, ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಶಮೀರ್, ಗಣಕ ವಿಭಾಗದ ಮುಖ್ಯಸ್ಥ ನೂತನ್, ಕಾರ್ಯಕ್ರಮದ ಸಂಯೋಜಕ ಶಶಿಕಾಂತ್ ಗೌಡ, ಗಣಕ ವಿಭಾಗದ ಉಪನ್ಯಾಸಕರು ಹಾಗೂ ವಿದ್ಯಾರ್ಥಿ ಪ್ರತಿನಿಧಿಯಾಗಿ ವಿದ್ಯಾರ್ಥಿ ಮುಹಮ್ಮದ್ ಯಾಸೀರ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News