ಉಡುಪಿ ಜಾಮೀಯ ಮಸೀದಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Update: 2024-08-15 12:12 GMT

ಉಡುಪಿ : ಉಡುಪಿ ಜಾಮಿಯಾ ಮಸೀದಿಯ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವವನ್ನು ಮಸೀದಿ ವಠಾರದಲ್ಲಿ ಆಚರಿಸಲಾಯಿತು.

ಮಸೀದಿಯ ಉಪಾಧ್ಯಕ್ಷ ವಿ.ಎಸ್.ಉಮರ್ ಧ್ವಜಾಹರೋಹಣ ನೆರವೇರಿಸಿದರು. ಮಸೀದಿಯ ಖತೀಬ್ ಮೌಲಾನ ರಶೀದ್ ಅಹಮದ್ ನದ್ವಿ ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದವರನ್ನು ಸ್ಮರಿಸಿದರು. ಈ ಮಹನೀಯರ ತ್ಯಾಗದಿಂದ ನಮಗೆ ದೊರೆತ ಸ್ವಾತಂತ್ರ್ಯವನ್ನು ಉಳಿಸಿ ಎಲ್ಲರೂ ಸಾಮರಸ್ಯದಿಂದ ಬದುಕಬೇಕಾಗಿದೆ ಎಂದು ಕಿವಿ ಮಾತು ಹೇಳಿದರು.

ಈ ಸಂದರ್ಭದಲ್ಲಿ ಮಸೀದಿಯ ಕಾರ್ಯದರ್ಶಿ ಖಾಲಿದ್ ಅಬ್ದುಲ್ ಅಝೀಝ್, ಖಜಾಂಜಿ ಶಾಹಿದ್ ಅಲಿ ಸಮಿತಿ, ಸದಸ್ಯರಾದ ಇಫ್ತಿಕಾರ್, ಜಮಾತ್ ಸದಸ್ಯರು, ಮುಸಲ್ಲಿ ಬಾಂಧವರು, ಮದ್ರಸದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಮಸೀದಿಯ ಮೊಹಸಿನ್ ಯೂನಸ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News