ಕಾರ್ಕಳದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Update: 2023-11-01 04:56 GMT

ಕಾರ್ಕಳ, ನ.1: ಕಾರ್ಕಳದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆಯಲ್ಲಿ ಕಾರ್ಕಳ ಪುರಸಭೆ ಮುಖ್ಯಾಧಿಕಾರಿ ರೂಪಾ ಟಿ. ಶೆಟ್ಟಿ ಕಾರ್ಕಳ ಅನಂತಶಯನ ವೃತ್ತದಲ್ಲಿ ಕನ್ನಡ ಭುವನೇಶ್ವರಿ ಭಾವಚಿತ್ರಕ್ಕೆ ಆರತಿ ಎತ್ತಿ, ತಿಲಕವಿಟ್ಟು, ಪುಷ್ಪಾರ್ಚನೆ ಮಾಡಿದರು.

ಕಾರ್ಕಳ ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರಭಾಕರ್ ಶೆಟ್ಟಿ ಕೊಂಡಳ್ಳಿ, ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ಭಾಸ್ಕರ್, ಕಾರ್ಕಳ ತಾಲೂಕು ತೋಟಗಾರಿಕಾ ಇಲಾಖೆ ಅಧಿಕಾರಿ ಶ್ರೀನಿವಾಸ್ ಉಪಸ್ಥಿತರಿದ್ದರು.

ಇದಕ್ಕೂ ಮೊದಲು ಕಾರ್ಕಳ ಅನಂತಶಯನದಿಂದ ಕನ್ನಡ ಭುವನೇಶ್ವರಿ ರಥ ಕಾರ್ಕಳದ ಮುಖ್ಯ ರಸ್ತೆಯಲ್ಲಿ ಕಾರ್ಕಳದ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸ್ಕೌಟ್ ಗೈಡ್, ಬ್ಯಾಂಡ್ ಸೆಟ್, ಟ್ಯಾಬ್ಲೋಗಳೊಂದಿಗೆ ಗಾಂಧಿ ಮೈದಾನದವರೆಗೆ ತಲುಪಿತು

ಈ ಸಂದರ್ಭ ಕಾರ್ಕಳ ಉಪ ತಹಶೀಲ್ದಾರ್ ಮಂಜುನಾಥ್, ಕಾರ್ಕಳ ಪುರಸಭಾ ಹಿರಿಯ ಆರೋಗ್ಯಾಧಿಕಾರಿ ಲೈಲಾ ಥೋಮಸ್, ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮುಹಮ್ಮದ್ ಶರೀಫ್, ಪರಿಸರ ಅಭಿಯಂತರ ಜ್ಯೋತಿಶ್ವರಿ, ಪುರಸಭಾ ಸದಸ್ಯರಾದ ಯೋಗಿಶ್ ದೇವಾಡಿಗ, ಪ್ರಶಾಂತ್, ಶಶಿಕಲಾ ಶೆಟ್ಟಿ, ಸಂತೋಷ್ ರಾವ್, ಮಾಜಿ ಸದಸ್ಯ ಪ್ರಕಾಶ್ ರಾವ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News