ಕಾರ್ಕಳ | ಮಹಿಳೆಯ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪ ಎದುರಿಸುತ್ತಿದ್ದ ಯುವಕ ಆತ್ಮಹತ್ಯೆ

Update: 2023-07-20 10:32 GMT

ಕಾರ್ಕಳ, ಜು.20: ಮಹಿಳೆಯೋರ್ವರ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪ ಎದುರಿಸುತ್ತಿದ್ದ ಯುವಕನೊಬ್ಬನ ಮೃತದೇಹವೂ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಈದು ಗ್ರಾಮದ ಗುಮ್ಮೆತ್ತು ಹಾಡಿಯಲ್ಲಿ ನಡೆದಿರುವುದು ವರದಿಯಾಗಿದೆ.

ಮೃತರನ್ನು ಈದು ಗ್ರಾಮ ನಿವಾಸಿ ಸಂತೋಷ್ ದೇವಾಡಿಗ ಯಾನೆ ಹರಿತನಯ ಎಂದು ಗುರುತಿಸಲಾಗಿದೆ.

ಕಾರ್ಕಳದ ಮಾರ್ಕೆಟ್ ರೋಡ್ನಲ್ಲಿರುವ ಮಹಿಳಾ ಕೋ- ಆಪರೇಟಿವ್ ಬ್ಯಾಂಕಿನಲ್ಲಿ ಕಚೇರಿ ಸಹಾಯಕಿಯಾಗಿದ್ದ ಪ್ರಮೀಳಾ ಎಂಬವರು ಜು.14ರಂದು ಕಚೇರಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರಮೀಳಾರ ಆತ್ಮಹತ್ಯೆಗೆ ಅವರ ಪತಿ ಪತಿ ನರೇಶ ಅವರ ದೂರದ ಸಂಬಂಧಿಕ ಸಂತೋಷ್ ದೇವಾಡಿಗ ಕುಮ್ಮಕ್ಕು ಕಾರಣ. ಆತ ಹಣ ನೀಡುವಂತೆ ಕಿರುಕುಳ ನೀಡುತ್ತಿದ್ದ ಎಂದು ಪ್ರಮೀಳಾರ ಸಹೋದರ ಕಾರ್ಕಳ ನಗರ ಠಾಣೆಗೆ ದೂರು ನೀಡಿದ್ದರು. ಅದರಂತೆ ಸಂತೋಷ್ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 306ರಡಿ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಪ್ರಕರಣ ದಾಖಲಾಗಿತ್ತು. ಆ ಬಳಿಕ ಸಂತೋಷ್ ತಲೆಮರೆಸಿಕೊಂಡಿದ್ದರು. ಇಂದು ಸಂತೋಷ್ ಮೃತದೇಹ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News