ಕಾರ್ಕಳ | ಬಸ್ಸಿನಿಂದ ಬಿದ್ದು ವಿದ್ಯಾರ್ಥಿ ಮೃತಪಟ್ಟ ಹಿನ್ನೆಲೆ: ವಿದ್ಯಾರ್ಥಿಗಳಿಂದ ಪ್ರತಿಭಟನೆ

Update: 2024-08-22 10:34 GMT

ಕಾರ್ಕಳ, ಆ.22: ಬಸ್ಸಿನಿಂದ ಎಸೆಯಲ್ಪಟ್ಟು ಕಾಲೇಜು ವಿದ್ಯಾರ್ಥಿಯೊಬ್ಬ ಬುಧವಾರ ಮೃತಪಟ್ಟ ಹಿನ್ನೆಲೆಯಲ್ಲಿ ಇಂದು ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಮಾಳ ಗ್ರಾಮದ ಹುಕ್ರಟ್ಟೆ ನಿವಾಸಿ ಜನಿತ್ ಶೆಟ್ಟಿ (19) ಎಂಬವರು ಚಲಿಸುತ್ತಿದ್ದ ಬಸ್ ನಿಂದ ಬಿದ್ದು ಬುಧವಾರ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಎಬಿವಿಪಿ ಸಂಘಟನೆ ಇಂದು ಪ್ರತಿಭಟನೆ ಆಯೋಜಿಸಿದ್ದು, ಸೂಕ್ತ ಬಸ್ ವ್ಯವಸ್ಥೆ ಇಲ್ಲದ ಕಾರಣ ಈ ದುರಂತ ನಡೆದಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದರು. ಜೊತೆಗೆ ಖಾಸಗಿ ಬಸ್ ಗಳ ಅಶಿಸ್ತಿಗೆ ಕಡಿವಾಣ ಹೇರದ ಸಾರಿಗೆ ಇಲಾಖೆ ವಿರುದ್ಧವೂ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ಈ ಭಾಗದಲ್ಲಿ ಬಸ್ಸುಗಳ ಕೊರತೆಯಿಂದ ವಿದ್ಯಾರ್ಥಿಗಳಿಗೆ ತುಂಬ ತೊಂದರೆಯಾಗುತ್ತಿದೆ. ತರಗತಿಗೆ ಹಾಜರಾಗುವುದು ತಡವಾದರೆ ವಿದ್ಯಾಸಂಸ್ಥೆ ಯಿಂದಲೂ ವಿದ್ಯಾರ್ಥಿಗಳಿಗೆ ಬೈಗುಳ ಸಿಗುತ್ತವೆ. ಆದ್ದರಿಂದ ಕಾಲೇಜು ತರಗತಿ ಸಮಯದಲ್ಲಿ ಬಸ್ಸುಗಳ ಸಂಖ್ಯೆ ಹೆಚ್ಚಿಸುವಂತೆ ವಿದ್ಯಾರ್ಥಿಗಳು ಪ್ರತಿಭಟನೆ ಮೂಲಕ ಒತ್ತಾಯ ಮಾಡಿದರು.

 

 

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News