ಕಾರ್ಕಳ: ಗ್ರಾಹಕನ ಸೋಗಿನಲ್ಲಿ ಜ್ಯುವೆಲ್ಲರಿಯಿಂದ ಸರ ಕಳವು

Update: 2024-09-12 18:36 GMT

ಸಾಂದರ್ಭಿಕ ಚಿತ್ರ 

ಕಾರ್ಕಳ: ಗ್ರಾಹಕನ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಿಂದ ಸರ ಕಳವು ಮಾಡಿರುವ ಘಟನೆ ಸೆ.11ರಂದು ಮಧ್ಯಾಹ್ನ ವೇಳೆ ಕಾರ್ಕಳ ಮೂರು ಮಾರ್ಗದ ಬಳಿ ನಡೆದಿದೆ.

ಮೂರು ಮಾರ್ಗದ ಬಳಿ ಇರುವ ಅಮಿತ್ ಎಂಬವರ ಉಷಾಲಕ್ಷ್ಮಿ ಜ್ಯುವೆಲ್ಲರಿ ಅಂಗಡಿಗೆ ಓರ್ವ ಅಪರಿಚಿತ ವ್ಯಕ್ತಿಯು ಬಂದು ಒಂದು ಚಿನ್ನದ ಕರಿಮಣಿ ಸರವನ್ನು ತೋರಿಸುವಂತೆ ಹೇಳಿದ್ದನು. ಅದರಂತೆ ಕೆಲಸದವರು 7.630 ಗ್ರಾಮ್ ತೂಕದ ಚಿನ್ನದ ಕರಿಮಣಿ ಸರವನ್ನು ನೋಡಲು ಕೊಟ್ಟಿದ್ದರು. ಕೆಲಸದವರು ಒಳಗೆ ಹೋಗಿ ವಾಪಾಸು ಬಂದು ನೋಡಿದಾಗ ಆ ವ್ಯಕ್ತಿ ಚಿನ್ನದ ಕರಿಮಣಿ ಸರವನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News