ಕಾರವಾರ - ಮಡಗಾಂವ್ ದೈನಂದಿನ ರೈಲು ಸಂಚಾರ 5 ದಿನ ರದ್ದು

Update: 2023-12-14 13:50 GMT

ಸಾಂದರ್ಭಿಕ ಚಿತ್ರ

ಉಡುಪಿ: ಕಾರವಾರ ಮತ್ತು ಮಡಗಾಂವ್ ಜಂಕ್ಷನ್ ನಡುವೆ ಸಂಚರಿಸುವ ದೈನಂದಿನ ವಿಶೇಷ ರೈಲಿನ ಸಂಚಾರವನ್ನು ಡಿ.17ರಿಂದ 21ರವರೆಗೆ ಒಟ್ಟು ಐದು ದಿನಗಳ ಕಾಲ ರದ್ದುಪಡಿಸಲಾಗಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.

ಹಾಸನ ರೈಲು ನಿಲ್ದಾಣದಲ್ಲಿ ಹಲವು ರೈಲ್ವೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕ್ರಾಂತಿವೀರ ಸಂಗೊಳ್ಳ ರಾಯಣ್ಣ ಬೆಂಗಳೂರು ನಿಲ್ದಾಣ ಹಾಗೂ ಕಾರವಾರ ನಡುವೆ ಸಂಚರಿಸುವ ದೈನಂದಿನ ಪಂಚಗಂಗಾ ಎಕ್ಸ್‌ಪ್ರೆಸ್ ರೈಲಿನ ಸಂಚಾರವನ್ನು ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳ ಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News