ಕಾಪು: ವಿದ್ಯಾರ್ಥಿನಿ ಆತ್ಮಹತ್ಯೆ

Update: 2023-10-26 06:14 GMT

ಕಾಪು, ಅ.26: ವೈಯಕ್ತಿಕ ಕಾರಣದಿಂದ ಮನನೊಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಟಪಾಡಿ ಮೂಡಬೆಟ್ಟು ಗ್ರಾಮದ ಕಲ್ತಟ್ಟ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಮೃತರನ್ನು ಕಲ್ತಟ್ಟ ನಿವಾಸಿ ಆನಂದ ಪೂಜಾರಿ ಎಂಬವರ ಪುತ್ರಿ ಅನನ್ಯಾ (17) ಎಂದು ಗುರುತಿಸಲಾಗಿದೆ. ಶಂಕರಪುರ ಸೈಂಟ್ ಜೋನ್ ಪ.ಪೂ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಅನನ್ಯ, ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದುಬಂದಿಲ್ಲ. ಈಕೆ ತಂದೆ ತಾಯಿ ಮತ್ತು ಸಹೋದರನನ್ನು ಅಗಲಿದ್ದಾಳೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News