ಕೊಲ್ಲೂರು ಸ್ನಾನಘಟ್ಟದಲ್ಲಿ ಮುಳುಗಿ ಕೇರಳದ ವ್ಯಕ್ತಿ ಮೃತ್ಯು

Update: 2023-09-01 14:23 GMT

ಕೊಲ್ಲೂರು, ಸೆ.1: ಕೊಲ್ಲೂರು ಗ್ರಾಮದ ಸೌಪಾರ್ಣಿಕ ಸ್ನಾನ ಘಟ್ಟದಲ್ಲಿ ತೀರ್ಥ ಸ್ನಾನ ಮಾಡುತ್ತಿದ್ದ ಕೇರಳ ಮೂಲದ ವ್ಯಕ್ತಿಯೊಬ್ಬರು ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಆ.30ರಂದು ಸಂಜೆ ವೇಳೆ ನಡೆದಿದೆ.

ಮೃತರನ್ನು ಕೇರಳ ಎರ್ನಾಕುಲಾಂ ಜಿಲ್ಲೆಯ ಅಯಪಿಕಲ್‌ನ ಅಶೊಕನ್ (55) ಎಂದು ಗುರುತಿಸಲಾಗಿದೆ. ಇವರು ಕುಟುಂಬ ಸಮೇತರಾಗಿ ಕೊಲ್ಲೂರಿಗೆ ಬಂದು ಮೂಕಾಂಬಿಕಾ ದೇವರ ದರ್ಶನ ಮುಗಿಸಿ ಸೌಪಾರ್ಣಿಕ ಸ್ನಾನ ಘಟ್ಟದಲ್ಲಿ ತೀರ್ಥ ಸ್ನಾನ ಮಾಡಲು ನದಿ ಬಳಿ ಹೋಗಿದ್ದರು. ಅಲ್ಲಿ ಸ್ನಾನ ಮಾಡುತ್ತಿರುವಾಗ ಅಶೊಕನ್ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿ ನಾಪತ್ತೆಯಾದರು.

ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದರು ಹುಡುಕಾಡಿ ಮೃತದೇಹವನ್ನು ಪತ್ತೆ ಹಚ್ಚಿದರು. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News