ಕೋಟ: ಕೆರೆಗೆ ಬಿದ್ದು ಕೃಷಿಕ ಮೃತ್ಯು

Update: 2023-09-02 15:42 GMT

ಕೋಟ: ಕೆರೆಯ ಹತ್ತಿರ ಗದ್ದೆಗೆ ಪಂಪ್‌ಸೆಟ್ ಆನ್ ಮಾಡಲು ಹೋದ ಕೃಷಿಕರೊಬ್ಬರು ಆಕಸ್ಮಿಕವಾಗಿ ಕಾಲುಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಸೆ.1ರಂದು ರಾತ್ರಿ ವೇಳೆ ನಡೆದಿದೆ.

ಮೃತರನ್ನು ಶಿರಿಯಾರ ಗ್ರಾಮದ ಸಕ್ಕಟ್ಟು ಹೊಯಿಗೆಬೈಲು ನಿವಾಸಿ ಬಾಬು ಶೆಟ್ಟಿ (61) ಎಂದು ಗುರುತಿಸಲಾಗಿದೆ. ಇವರು ಕೆರೆಯಿಂದ ಗದ್ದೆಗೆ ಪಂಪ್‌ಸೆಟ್ ಮೂಲಕ ನೀರು ಬೀಡಲು ಹೋಗಿದ್ದು ಈ ವೇಳೆ ಅಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟರೆಂದು ತಿಳಿದುಬಂದಿದೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News