ಕುಂದಾಪುರ: ಮುಸುಕುಧಾರಿಗಳಿಂದ ಆಭರಣ ಮಳಿಗೆಗೆ ನುಗ್ಗಲು ವಿಫಲ ಯತ್ನ

Update: 2024-01-01 06:56 GMT

ಕುಂದಾಪುರ, ಜ.1: ಮುಸುಕುಧಾರಿ ದರೋಡೆಕೋರರ ತಂಡವೊಂದು ಶುಕ್ರವಾರ ತಡರಾತ್ರಿ ತೆಕ್ಕಟ್ಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ಶಾನುಭೋಗ್ ಕಾಂಪ್ಲೆಕ್ಸ್ ನಲ್ಲಿರುವ ಆಭರಣ ಮಳಿಗೆಗೆ ನುಗ್ಗಲು ವಿಫಲ ಯತ್ನಿಸಿದ ಘಟನೆ ನಡೆದಿದೆ. ಈ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಡಿ.21ರಂದು ತೆಕ್ಕಟ್ಟೆ ಕೆನರಾ ಬ್ಯಾಂಕ್ ಬಳಿಯ ಸಮೃದ್ಧಿ ಕಾಂಪ್ಲೆಕ್ಸ್ ನಲ್ಲಿರುವ ಮೀನಾಕ್ಷಿ ಫರ್ನಿಚರ್ ಶೋರೂಮ್, ಗೋಡೌನ್ ಮತ್ತು ಟೈಲರಿಂಗ್ ಅಂಗಡಿಯಲ್ಲಿ ಇತ್ತೀಚೆಗೆ ಕಳ್ಳತನಕ್ಕೆ ಯತ್ನಿಸಿದ ಬೆನ್ನಲ್ಲೇ ಈ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದರೂ, ಜ್ಯುವೆಲ್ಲರಿ ಮಾಲಕರು ಪೊಲೀಸರಿಗೆ ದೂರು ದಾಖಲಿಸಿಲ್ಲ ಎನ್ನಲಾಗಿದೆ.

ಹೆದ್ದಾರಿ ಸಮೀಪವೇ ನಡೆದ ಈ ಕೃತ್ಯದ ಬಗ್ಗೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News