ಕುಂದಾಪುರ: ಅನ್ನಭಾಗ್ಯದ ಅಕ್ಕಿ ಅಕ್ರಮ ಸಾಗಾಟ; ಓರ್ವನ ಬಂಧನ

Update: 2023-12-29 15:30 GMT

ಕುಂದಾಪುರ, ಡಿ.29: ಅನ್ನಭಾಗ್ಯದ ಅಕ್ಕಿಯನ್ನು ಗೂಡ್ಸ್ ರಿಕ್ಷಾದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದಲ್ಲಿ ಓರ್ವನನ್ನು ಆಹಾರ ನಿರೀಕ್ಷಕರ ನೇತೃತ್ವದ ತಂಡ ಖಾರ್ವಿಕೇರಿ ಎಂಬಲ್ಲಿ ಡಿ.28ರಂದು ಮಧ್ಯಾಹ್ನ ವೇಳೆ ಬಂಧಿಸಿದೆ.

ಕುಂದಾಪುರ ಮೇಲ್ಕೇರಿಯ ಕೃಷ್ಣ (43) ಬಂಧಿತ ಆರೋಪಿ.

ಕುಂದಾಪುರ ಆಹಾರ ನಿರೀಕ್ಷಕ ಸುರೇಶ ಎಚ್.ಎಸ್. ಖಚಿತ ಮಾಹಿತಿಯಂತೆ ಕುಂದಾಪುರ ಎಸ್ಸೈ ವಿನಯ್ ಕೊರ್ಲಹಳ್ಳಿ ಹಾಗೂ ಸಿಬ್ಬಂದಿಯವರೊಂದಿಗೆ ಅಕ್ರಮವಾಗಿ ಅಕ್ಕಿ ಸಾಗಿಸುತ್ತಿದ್ದ ರಿಕ್ಷಾವನ್ನು ತಡೆದು ನಿಲ್ಲಿಸಿ ಪರಿಶೀಲಿಸಿದರು. ರಿಕ್ಷಾದಲ್ಲಿದ್ದ ಒಟ್ಟು 200 ಕೆ.ಜಿ ಅಕ್ಕಿಯನ್ನು ವಾಹನ ಸಹಿತ ವಶಪಡಿಸಿಕೊಂಡರು.

ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News