ಕುಂದಾಪುರ: ಕಾರು ಢಿಕ್ಕಿ; ರಸ್ತೆ ಬದಿ ಲಾರಿ ಟಯರ್ ಚೆಕ್ ಮಾಡುತ್ತಿದ್ದ ಚಾಲಕ ಮೃತ್ಯು

Update: 2024-01-05 05:54 GMT

ಕುಂದಾಪುರ, ಜ.5: ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ಲಾರಿ ನಿಲ್ಲಿಸಿ ಟಯರ್ ಪರಿಶೀಲಿಸುತ್ತಿದ್ದ ಚಾಲಕ ಮೃತಪಟ್ಟ ಘಟನೆ ಕೋಟೇಶ್ವರದ ಅಂಕದಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ರಾತ್ರಿ ನಡೆದಿದೆ.

ಮೃತ ಲಾರಿ ಚಾಲಕನನ್ನು ಲಾಡಸಾಬ್ ನದಾಫ್ ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಲಾರಿಯ ಟಯರ್ ಪಂಚರ್ ಆಗಿದ್ದು, ಲಾರಿಯನ್ನು ರಸ್ತೆ ಬದಿ ನಿಲ್ಲಿಸಿದ ಚಾಲಕ ನದಾಪ್ ಟಯರ್ ಚೆಕ್ ಮಾಡುತ್ತಿದ್ದರು. ಈ ವೇಳೆ ಕೋಟೇಶ್ವರ ಕಡೆಯಿಂದ ಕುಂದಾಪುರ ಕಡೆಗೆ ಅತೀ ವೇಗದಿಂದ ಬಂದ ಕಾರು ನದಾಫ್ ಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತದ ರಭಸಕ್ಕೆ ರಸ್ತೆಗೆ ಬಿದ್ದು ತಲೆಗೆ ತೀವ್ರ ಸ್ವರೂಪದ ಗಾಯಗೊಂಡ ನದಾಫ್ ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು ಎಂದು ತಿಳಿದುಬಂದಿದೆ.

ಕಾರು ಚಾಲಕ ನಿಲ್ಲಿಸದೇ ಪರಾರಿಯಾಗಿದ್ದು, ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News