ಕುಂದಾಪುರ | ಪಹಲ್ಗಾಮ್ನಲ್ಲಿ ಭಯೋತ್ಪಾದಕ ದಾಳಿಗೆ ಸಮುದಾಯ ಸಂಘಟನೆ ಖಂಡನೆ
Update: 2025-04-29 16:18 IST
ಕುಂದಾಪುರ : ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ ಸಿಲುಕಿ 28 ಮಂದಿ ಪ್ರಾಣ ಕಳೆದುಕೊಂಡಿದ್ದು, ಪ್ರವಾಸಿಗರ ಮೇಲೆ ನಡೆಸಿದ ಭಯೋತ್ಪಾದಕರ ಈ ದಾಳಿಯನ್ನು ಸಮುದಾಯ ಸಾಂಸ್ಕೃತಿಕ ಸಂಘಟನೆ ಕುಂದಾಪುರ ಖಂಡಿಸಿದೆ.
ಈ ದಾಳಿ ಆಘಾತಕಾರಿ ಮತ್ತು ನೋವಿನ ಸಂಗತಿ. ಅಮಾಯಕರ ಮೇಲಿನ ಈ ದಾಳಿ ಖಂಡನೀಯ. ಈ ಘಟನೆಗೆ ಕಾರಣರಾದವರನ್ನು ಕಂಡುಹಿಡಿದು ಅವರಿಗೆ ಶಿಕ್ಷೆ ವಿಧಿಸಬೇಕೆಂದು ಎಂದು ಸಮುದಾಯ ಸಂಘಟನೆ ಪ್ರಕಟಣೆಯಲ್ಲಿ ಆಗ್ರಹಿಸಿದೆ.