ಕುಂದಾಪುರ: ಆರ್. ಎನ್. ಶೆಟ್ಟಿ ಪಿಯು ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ

Update: 2023-07-19 15:23 GMT

ಕುಂದಾಪುರ, ಜು.19: ವೃತ್ತಿಪರ ವಿದ್ಯೆಯಲ್ಲಿ ಪರಿಣತಿಯನ್ನು ಪಡೆದು ತನ್ನ ಬೆಳವಣಿಗೆಯ ಮೂಲಕ ಇತರರ ಯಶಸ್ಸಿಗೂ ಸಹಕಾರಿಯಾಗಬೇಕು. ಈ ರೀತಿಯಲ್ಲಿ ವಿದ್ಯಾರ್ಥಿಗಳು ಎಳೆ ಪ್ರಾಯದಿಂದಲೇ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಜೇಸಿ ವಲಯ 15ರ ತರಬೇತುದಾರ ಡಾ.ಜಗದೀಶ್ ಜೋಗಿ ಹೇಳಿದ್ದಾರೆ.

ಜೇಸಿಐ ಉಪ್ಪುಂದದ ವತಿಯಿಂದ ಕುಂದಾಪುರದ ಆರ್. ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡುತಿದ್ದರು.

ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ನವೀನ್ ಕುಮಾರ ಶೆಟ್ಟಿ, ಯುವ ವಿದ್ಯಾರ್ಥಿಗಳಲ್ಲಿ ವೈಚಾರಿಕ ಬೆಳವಣಿಗೆಯನ್ನು ತರುವ ಸದುದ್ದೇಶ ಹೊಂದಿರುವ ಈ ಕಾರ್ಯಕ್ರಮದ ಸಂಪೂರ್ಣ ಪ್ರಯೋಜನವನ್ನು ಪಡೆಯಬೇಕು ಎಂದರು.

ಜೆಜೆಸಿ ಘಟಕದ ಅಧ್ಯಕ್ಷೆ ನಿಶಾ ಸಂತೋಷ್ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಜೇಸಿಐ ಉಪ್ಪುಂದ ಘಟಕದ ಅಧ್ಯಕ್ಷ ಪಿ ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಜೇಸಿಐ ಉಪ್ಪುಂದದ ಮಾಜಿ ಅಧ್ಯಕ್ಷ ಮಂಗೇಶ್ ಶಾನುಭಾಗ್, ನಿಕಟಪೂರ್ವ ಅಧ್ಯಕ್ಷ ನಾಗರಾಜ ಪೂಜಾರಿ ಹಾಗೂ ಕುಂದಾಪುರ ಜೆಸಿಯ ಕಾರ್ಯ ದರ್ಶಿ ರಾಕೇಶ್ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಜ್ಯೂನಿಯರ್ ಜೆಸಿ ಸದಸ್ಯ ಸುಮಿತ್ ಅತಿಥಿಗಳನ್ನು ಸ್ವಾಗತಿಸಿದರೆ ಕಾಲೇಜಿನ ಆಂಗ್ಲಭಾಷಾ ಉಪನ್ಯಾಸಕಿ ಸುಮತಿ ಶೆಣೈ ವಂದಿಸಿದರು. ಜ್ಯೂನಿಯರ್ ಜೆಸಿ ಸದಸ್ಯೆ ಅಸ್ಮಿತಾ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News