ಕುಂದಾಪುರ: ಬಾವಿಗೆ ಬಿದ್ದ ಚಿರತೆಯ ರಕ್ಷಣೆ

Update: 2023-09-16 08:28 GMT

ಕುಂದಾಪುರ, ಸೆ.16: ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯ ಇಲಾಖೆಯವರು ರಕ್ಷಿಸಿದ ಘಟನೆ ಕಟ್‌ಬೆಲ್ತೂರು ಗ್ರಾಪಂ ವ್ಯಾಪ್ತಿಯ ಸುಳ್ಸೆ ಎಂಬಲ್ಲಿ ಶನಿವಾರ ನಡೆದಿದೆ.

ಬೇಟೆ ಅರಸಿ ನಾಡಿಗೆ ಬಂದ ಚಿರತೆಯೊಂದು ಹೆಮ್ಮಾಡಿ ಸಮೀಪದ ಸುಳ್ಸೆ ನಿವಾಸಿ ಬಾಬು ಪೂಜಾರಿ ಎಂಬವರ ಮನೆ ಸಮೀಪದ ತೋಟದಲ್ಲಿನ ಬಾವಿಗೆ ಶುಕ್ರವಾರ ರಾತ್ರಿ ಬಿತ್ತೆನ್ನಲಾಗಿದೆ. ಈ ವಿಚಾರ ಬೆಳಿಗ್ಗೆ ಬೆಳಕಿಗೆ ಬಂದಿದ್ದು ಕೂಡಲೇ ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು.

ತಕ್ಷಣ ಸ್ಥಳಕ್ಕೆ ಆಗಮಿಸಿದ ಇಲಾಖೆಯವರು ಬಾವಿಗೆ ಬೋನು ಇಳಿಸಿ ಚಿರತೆ ಬೋನಿನೊಳಕ್ಕೆ ಹೋದಾಗ ನಾಜೂಕಾಗಿ ಮೇಲಕ್ಕೆತ್ತಿದ್ದಾರೆ. ಎರಡು ವರ್ಷ ಪ್ರಾಯದ ಗಂಡು ಚಿರತೆ ರಕ್ಷಣೆಯಾಗಿದ್ದು ಆರೋಗ್ಯವಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಕುಂದಾಪುರ ಉಪ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಉದಯ ಎಂ.ನಾಯಕ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕ್ಲಿಪರ್ಡ್ ಲೊಬೋ ಮಾರ್ಗದರ್ಶನದಲ್ಲಿ ಕುಂದಾಪುರ ವಲಯ ಅರಣ್ಯಾಧಿಕಾರಿ ಟಿ.ಕಿರಣ್ ಬಾಬು, ಉಪ ವಲಯ ಅರಣ್ಯಾಧಿಕಾರಿಗಳಾದ ಉದಯ್, ಶರತ್, ಗುರುರಾಜ್, ದಿಲೀಪ್, ಸುನೀಲ್, ಗೀತಾ, ಅರಣ್ಯ ಇಲಾಖೆ ಸಿಬ್ಬಂದಿ ದೀಪಶ್ರೀ, ಮಾಲತಿ, ಉದಯ, ಬಸವರಾಜ್, ಚಂದ್ರಾವತಿ, ರಾಘವೇಂದ್ರ ಮೊದಲಾದವರು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News