ಕುಂದಾಪುರ: ಬಾವಿಗೆ ಬಿದ್ದು ಮಹಿಳೆ ಮೃತ್ಯು

Update: 2023-09-11 16:19 GMT

ಕುಂದಾಪುರ, ಸೆ.11: ಬಾವಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸೆ.11ರಂದು ಬೆಳಗ್ಗೆ ನಡೆದಿದೆ.

ಮೃತರನ್ನು ಕನಕ ಬಿ.ಹೆಗ್ಡೆ ಎಂದು ಗುರುತಿಸಲಾಗಿದೆ.

ಮನೆಯ ತೋಟದಲ್ಲಿ ಅಡಿಕೆ ಹಾಗೂ ತೆಂಗಿನ ಕಾಯಿ ಹೆಕ್ಕಲು ಹೋದ ಕನಕ, ಅಕಸ್ಮಿಕವಾಗಿ ತೋಟದಲ್ಲಿರುವ ಆವರಣ ಇಲ್ಲದ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News