ರೈತ ಬೆಳೆದ ಬೆಳೆಗೆ ರೈತನೆ ದರ ನಿಗದಿಪಡಿಸಲಿ: ಅನಂತಪದ್ಮನಾಭ ಐತಾಳ್

Update: 2024-08-31 12:24 GMT

ಕೋಟ, ಆ.31: ದೇಶದಲ್ಲಿ ಕೃಷಿಗಾಗಿ ಸಾಕಷ್ಟು ಪ್ರತಿಭಟನೆಗಳು, ಉಪವಾಸ ಸತ್ಯಾಗ್ರಹಗಳು ನಡೆಯುತ್ತದೆ. ಆದರೆ ಇದು ಯಾವುದು ಕೂಡ ಸರಕಾರದ ಕದ ತಟ್ಟುತ್ತಿಲ್ಲ. ಇದಕ್ಕೆ ಪರ್ಯಾಯ ಮಾರ್ಗ ಎಂದರೆ ಈ ದೇಶದಲ್ಲಿ ರೈತನೆ ಅವನು ಬೆಳೆದ ಬೆಳೆಗೆ ದರ ನಿಗದಿಪಡಿಸುವಂತ್ತಾಗಬೇಕು ಎಂದು ಸಾಲಿಗ್ರಾಮ ಶ್ರೀಗುರುನರಸಿಂಹ ದೇಗುಲದ ಟ್ರಸ್ಟಿ ಕೆ.ಅನಂತಪದ್ಮನಾಭ ಐತಾಳ್ ಹೇಳಿದ್ದಾರೆ.

ಕೋಟ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ಎಸ್.ಸಿ.ಐ ಕೋಟ ಲಿಜನ್, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಇವುಗಳ ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ ಸಾಧಕ ರೈತರನ್ನು ಗುರುತಿ ಸುವ 38ನೇ ಸರಣಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಕೋಟದ ಕಾಸನಗುಂದು ಪರಿಸರದ ಹಿರಿಯ ಕೃಷಿಕ ಸುಧಾಕರ ಶೆಟ್ಟಿ ಅವರನ್ನು ಕೃಷಿ ಪರಿಕರ ನೀಡಿ ಗೌರವಿಸಲಾಯಿತು. ಪರಿಸರ ಜಾಗೃತಿ ಮೆರೆಯುವ ದಿಸೆಯಿಂದ ಅವರ ತೋಟದಲ್ಲಿ ಗಿಡ ನೆಟ್ಟು ಸಂಭ್ರಮಿಸ ಲಾಯಿತು. ಅಧ್ಯಕ್ಷತೆಯನ್ನು ಪಂಚ ವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಉದ್ಯಮಿ ಸದಾನಂದ ಪೂಜಾರಿ ಗಿಳಿಯಾರು, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಅಧ್ಯಕ್ಷ ಜಿ.ತಿಮ್ಮ ಪೂಜಾರಿ, ಕೃಷಿಕ ಭಾಸ್ಕರ್ ಶೆಟ್ಟಿ ಮಣೂರು, ರೈತ ಧ್ವನಿ ಸಂಘ ಕೋಟ ಅಧ್ಯಕ್ಷ ಎಂ.ಜಯರಾಮ ಶೆಟ್ಟಿ, ಕೋಟ ಗ್ರಾಪಂ ಸದಸ್ಯೆ ವನೀತ ಶ್ರೀಧರ ಆಚಾರ್, ಗೆಳೆಯರ ಬಳಗ ಕಾರ್ಕಡ ಸದಸ್ಯ ಶೇಖರ್ ಮುಡೋಳಿ, ಎಸ್‌ಸಿಐ ಕೋಟ ಲಿಜನ್ ಅಧ್ಯಕ್ಷ ಕೇಶವ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಪಂಚವರ್ಣದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಮತ್ತಿತರರು ಉಪಸ್ಥಿತರಿದ್ದರು.

ಪಂಚವರ್ಣದ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಸ್ವಾಗತಿಸಿದರು. ಪಂಚವರ್ಣ ಮಹಿಳಾ ಮಂಡಲದ ಸಂಚಾಕಿ ಸುಜಾತ ಎಂ.ಬಾಯರಿ ಸನ್ಮಾನ ಪತ್ರ ವಾಚಿಸಿ ಕಾರ್ಯಕ್ರಮ ನಿರೂಪಿಸಿದರು. ಸದಸ್ಯ ಶಶಿಧರ ತಿಂಗಳಾಯ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News