ವಿವಿಧ ಯೋಜನೆಯಡಿ ಸಾಲ ಸೌಲಭ್ಯ: ಅರ್ಜಿ ಆಹ್ವಾನ

Update: 2023-10-11 13:52 GMT

ಉಡುಪಿ : ಕರ್ನಾಟಕ ಉಪ್ಪಾರ ಅಬಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ (ನೂತನ), ಗಂಗಾ ಕಲ್ಯಾಣ ನೀರಾವರಿ ಯೋಜನೆ, ಬ್ಯಾಂಕ್‌ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ನೇರ ಸಾಲ ಹಾಗೂ ಸ್ವಾವಲಂಭಿ ಸಾರಥಿ ಯೋಜನೆಯ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ಸೇವಾಸಿಂಧು ಪೋರ್ಟಲ್‌ನಡಿ ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್‌ಜೀ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ ಸಲ್ಲಿಸಲು ನವೆಂಬರ್ ೩ ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ - http://upparadevelopment.karnataka.gov.in - ಅಥವಾ ನಿಗಮದ ಕೇಂದ್ರ ಕಚೇರಿ ದೂ.ಸಂಖ್ಯೆ: 080-22252555 ಹಾಗೂ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಉಡುಪಿ ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News